Publish Date: Tue, 08 Nov 2022 (09:49 IST)
Updated Date: Tue, 08 Nov 2022 (08:51 IST)
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ.
ಸಿದ್ದರಾಮಯ್ಯ ಓರ್ವ ಅಲೆಮಾರಿ ರಾಜಕಾರಣಿ. ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ಹಿಂದೆ ವರುಣ, ನಂತರ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಇದೀಗ ಕೋಲಾರ, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರಿಗೆ ನಿಲ್ಲಲ್ಲು ಕ್ಷೇತ್ರ ಇಲ್ಲ. ಪರಿಸ್ಥಿತಿ ಈಗಿರುವಾಗ ಇನ್ನು 150 ಸ್ಥಾನ ಎಲ್ಲಿಂದ ಗೆಲ್ಲುವುದು. ಪಕ್ಷ ಅಧಿಕಾರಕ್ಕೆ ಬರುವುದಾದರು ಹೇಗೆ ಎಂದರು.
Ramya kosira
Publish Date: Tue, 08 Nov 2022 (09:49 IST)
Updated Date: Tue, 08 Nov 2022 (08:51 IST)