Publish Date: Thu, 20 Sep 2018 (15:12 IST)
Updated Date: Thu, 20 Sep 2018 (15:13 IST)
ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ತೆರಳಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಶಾಸಕರಾದ ರಾಮಪ್ಪ ಮತ್ತು ಸಿಎಸ್ ಶಿವಳ್ಳಿಗೆ ಬಿಜೆಪಿ ನಾಯಕರು ಕರೆ ಮಾಡಿ ಪಕ್ಷಕ್ಕೆ ಸೆಳೆಯಲು ಯತ್ನಿಸಿದ್ದಾರೆ ಎಂಬ ಗುಮಾನಿಗಳ ಬೆನ್ನಲ್ಲೇ ಸಿದ್ದರಾಮಯ್ಯ ಇಬ್ಬರೂ ಶಾಸಕರಿಗೆ ಕರೆ ಮಾಡಿ ಪ್ರತಿಕ್ರಿಯಿಸದಿರಲು ತಾಕೀತು ಮಾಡಿದ್ದಾರೆ.
ಬಿಜೆಪಿ ಆಮಿಷಗಳಿಗೆ ಬಲಿಯಾಗಬೇಡಿ. ನಾನು ಬೆಂಗಳೂರಿಗೆ ಬಂದ ತಕ್ಷಣ ನನ್ನನ್ನು ಭೇಟಿಯಾಗಿ. ಮಾತುಕತೆ ಮಾಡೋಣ ಎಂದು ಸಿದ್ದರಾಮಯ್ಯ ಈ ಶಾಸಕರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜಾರಕಿಹೊಳಿ ಸಹೋದರರಲ್ಲಿ ಒಬ್ಬರಾದ ರಮೇಶ್ ಜಾರಕಿಹೊಳಿಗೂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.