ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದು ಡೌಟು?!

Webdunia
ಮಂಗಳವಾರ, 15 ಮೇ 2018 (05:53 IST)
ಬೆಂಗಳೂರು: ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಸಾರಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಮತದಾರ ಬರೆದಿರುವ ರಾಜಕಾರಣಿಗಳ ಭವಿಷ್ಯ ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.

ಇದುವರೆಗೆ ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಸಿಎಂ ಆಗಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿತ್ತು. ಆದರೆ ಒಂದು ವೇಳೆ ಕಾಂಗ್ರೆಸ್ ಗೆ ಬಹುಮತ ಬಾರದೇ ಮೈತ್ರಿ ಸರ್ಕಾರ ರಚಿಸುವ ಹಾಗಾದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವುದು ಡೌಟು.

ಕಾಂಗ್ರೆಸ್ ಜೆಡಿಎಸ್ ಬೆಂಬಲ ಕೋರಬೇಕಾದರೆ, ಜೆಡಿಎಸ್ ನಾಯಕರು ಬಹುಶಃ ಇದೇ ಬೇಡಿಕೆ ಮುಂದಿಡಬಹುದು. ಜೆಡಿಎಸ್ ನಾಯಕರ ಮೇಲೆ ಚುನಾವಣೆ ಪ್ರಚಾರ ಸಂದರ್ಭದಲ್ಲೇ ಸಿದ್ದರಾಮಯ್ಯ ವಾಚಮಗೋಚರವಾಗಿ ಟೀಕೆ ಮಾಡಿದ್ದರು. ಜೆಡಿಎಸ್ ಗೂ ಸಿದ್ದರಾಮಯ್ಯ ಮೇಲೆ ಅಸಮಾಧಾನವಿದೆ. ಹೀಗಾಗಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆಂದರೆ ಜೆಡಿಎಸ್ ಒಪ್ಪಲಾರದು. ಅನಿವಾರ್ಯವಾಗಿ ಹೊಸ ಮುಖ್ಯಮಂತ್ರಿಯನ್ನು ಆರಿಸಬೇಕಾಗುತ್ತದೆ. ಒಂದು ವೇಳೆ ಜೆಡಿಎಸ್ ಗೆ 40 ಕ್ಕಿಂತ ಹೆಚ್ಚು ಸ್ಥಾನ ಬಂದಲ್ಲಿ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾದರೂ ಅಚ್ಚರಿಯಿಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments