Webdunia - Bharat's app for daily news and videos

Install App

ಗೊಂಬೆ ಆಡ್ಸೋನು ಮೇಲೆ ಕುಂತವ್ನು ಎಂದು ಮೋದಿಗೆ ವ್ಯಂಗ್ಯ ಮಾಡಿದ ಸಿದ್ದರಾಮಯ್ಯ

Krishnaveni K
ಬುಧವಾರ, 21 ಆಗಸ್ಟ್ 2024 (16:23 IST)
ಬೆಂಗಳೂರು: ತಮ್ಮ ಮೇಲೆ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರ್ಟೂನ್ ಒಂದರ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ಮುಡಾ ಸೈಟು ಹಗರಣವನ್ನು ಪ್ರತಿಪಕ್ಷಗಳು ವಿನಾಕಾರಣ ಎಳೆದು ತರುತ್ತಿವೆ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ರಾಜ್ಯಪಾಲರು ತನಿಖೆಗೆ ಅನುಮತಿಸಿರುವುದು ನುಂಗಲಾರದ ತುತ್ತಾಗಿದೆ. ಈ ಬಗ್ಗೆ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಕೇಂದ್ರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುತ್ತಲೇ ಇದ್ದಾರೆ.

ಇದೀಗ ರಾಜ್ಯಪಾಲರು, ಮೋದಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರನ್ನೊಳಗೊಂಡ ವ್ಯಂಗ್ಯ ಚಿತ್ರ ಪ್ರಕಟಿಸಿ ಗೊಂಬೆ ಆಡ್ಸೋನು ಮೇಲೆ ಕುಂತವ್ನು ಎಂದು ಟಾಂಗ್ ಕೊಟ್ಟಿದ್ದಾರೆ. ಈ ವ್ಯಂಗ್ಯ ಚಿತ್ರದಲ್ಲಿ ಮೋದಿ ರಾಜ್ಯಪಾಲರ ತಲೆಮೇಲೆ ಕೂತು ಗೊಂಬೆ ಆಡಿಸುವವರಂತೆ ಚಿತ್ರಿಸಲಾಗಿದೆ. ಇನ್ನೊಂದೆಡೆ ಕುಮಾರಸ್ವಾಮಿಯವರು ಹಗರಣಗಳ ಫೈಲ್ ಗಳ ಮೇಲೆ ನಿಂತಿರುವಂತೆ ಬಿಂಬಿಸಲಾಗಿದೆ.

ಈ ವ್ಯಂಗ್ಯ ಚಿತ್ರದ ಮೂಲಕ ತಮ್ಮ ಮೇಲಿನ ಪ್ರಕರಣ ಮೋದಿಯವರದ್ದೇ ಪಿತೂರಿ ಎಂದು ಆರೋಪ ಮಾಡಿದ್ದಾರೆ. ಇಂದು ಕೊಪ್ಪಳದಲ್ಲಿ ಮಾತನಾಡಿದ ಅವರು ಅಗತ್ಯ ಬಿದ್ದರೆ ಕುಮಾರಸ್ವಾಮಿಯನ್ನು ಬಂಧಿಸಲೂ ಹಿಂದೆ ಮುಂದೆ ನೋಡಲ್ಲ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕುಮಾರಸ್ವಾಮಿ ಇಂತಹ 100 ಸಿದ್ದರಾಮಯ್ಯ ಬಂದರೂ ನನ್ನ ಬಂಧಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments