Webdunia - Bharat's app for daily news and videos

Install App

ಕೊನೆಯುಸಿರೆಳೆಯುವ ಮುನ್ನ ಎಸ್ಎಂ ಕೃಷ್ಣ ಕರೆ ಮಾಡಿದ್ದು ಇವರಿಗೆ

Krishnaveni K
ಬುಧವಾರ, 11 ಡಿಸೆಂಬರ್ 2024 (12:51 IST)
ಬೆಂಗಳೂರು: ಮೊನ್ನೆ ತಡರಾತ್ರಿ ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣ ಕೊನೆಯದಾಗಿ ಕರೆ ಮಾಡಿದ್ದು ಯಾರಿಗೆ ಯಾರ ಜೊತೆ ಮಾತನಾಡಿದರೆಂಬುದು ಈಗ ಬಹಿರಂಗವಾಗಿದೆ.

ಎಸ್ಎಂ ಕೃಷ್ಣ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೊನ್ನೆ ತಡರಾತ್ರಿ ಅವರಿಗೆ ಹೃದಯಾಘಾತವಾಗಿದ್ದು ಎಲ್ಲರನ್ನೂ ಬಿಟ್ಟು ಅಗಲಿದ್ದಾರೆ. ಇಂದು ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರೀ ಗೌರವಗಳೊಂದಿಗೆ ನಡೆಯಲಿದೆ. ಇದಕ್ಕೆ ಸಾಕಷ್ಟು ಜನ ಗಣ್ಯರು ಆಗಮಿಸುತ್ತಿದ್ದಾರೆ.

ನಾಡು ಕಂಡ ಶ್ರೇಷ್ಠ ಸಿಎಂಗಳ ಸಾಲಿನಲ್ಲಿ ಎಸ್ಎಂ ಕೃಷ್ಣ ಕೂಡಾ ಒಬ್ಬರು. ಅವರು ಇತ್ತೀಚೆಗಿನ ದಿನಗಳಲ್ಲಿ ರಾಜಕೀಯದಿಂದ ಕೊಂಚ ದೂರವೇ ಉಳಿದಿದ್ದರು. ಆದರೂ ತಮ್ಮ ಆತ್ಮೀಯರ ಜೊತೆ ವೈಯಕ್ತಿಕವಾಗಿ ಕರೆ ಮಾಡಿ ಮಾತನಾಡಿ ಸಲಹೆ, ಸೂಚನೆಗಳನ್ನು ನೀಡುತ್ತಿದ್ದರಂತೆ.

ಇದೀಗ ತಮ್ಮ ಸಾವಿಗೆ ಮುನ್ನ ಎಸ್ಎಂಕೆ ಯಾರ ಜೊತೆಗೆ ಮಾತನಾಡಿದ್ದು ಎಂದು ಬಹಿರಂಗವಾಗಿದೆ. ಸಾವಿಗೆ ಮುನ್ನ ಕೊನೆಯದಾಗಿ ಅವರ ಕುಟುಂಬ ವೈದ್ಯ ಡಾ ವಿಕೆ ಶ್ರೀನಿವಾಸ್ ಅವರಿಗೆ ಕರೆ ಮಾಡಿದ್ದರಂತೆ. ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಏನೇ ವಿಚಾರವಿದ್ದರೂ ಎಸ್ಎಂಕೆ ಕರೆ ಮಾಡುತ್ತಿದ್ದರು. ಇದೀಗ ಕೊನೆಯ ಬಾರಿಗೂ ವೈದ್ಯರಿಗೆ ಕರೆ ಮಾಡಿ ಸಲಹೆ ಪಡೆದಿದ್ದರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments