Publish Date: Fri, 27 Jan 2023 (12:14 IST)
Updated Date: Fri, 27 Jan 2023 (12:16 IST)
ಬೆಂಗಳೂರು : ನಾಡಿಗಾಗಿ ದುಡಿದು ಅತ್ಯುತ್ತಮ ಸಾಧನೆಯನ್ನು ಮಾಡಿ ಎಲ್ಲ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿನ ಎಸ್.ಎಂ ಕೃಷ್ಣ ಅವರ ಮನೆಗೆ ತೆರಳಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ನಮ್ಮ ರಾಜ್ಯದ ರಾಜಕಾರಣಿಗಳಿಗೆ ಎಸ್.ಎಂ ಕೃಷ್ಣ ಅವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರು ಈ ಮಹಾನ್ ರಾಜಕಾರಣಿಯನ್ನು ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.