ಕಾಡಿನಿಂದ‌ ನಾಡಿಗೆ ಬಂದ ನಾಗರ ಹಾವು ಮನೆಯೊಂದಕ್ಕೆ‌‌ ಎಂಟ್ರಿ

Webdunia
ಭಾನುವಾರ, 1 ಏಪ್ರಿಲ್ 2018 (14:38 IST)
ಆಹಾರ ಹುಡುಕುತ್ತಾ ಕಾಡಿನಿಂದ‌ ನಾಡಿಗೆ ಬಂದ ನಾಗರ ಹಾವು ಮನೆಯೊಂದಕ್ಕೆ‌‌ ಎಂಟ್ರಿ ಕೊಟ್ಟಿದೆ. ಒಂದು ಕೋಳಿಯನ್ನ ಸಾಯಿಸಿ, ನಾಲ್ಕು ಕೋಳಿ ಮೊಟ್ಟೆಯನ್ನ ನುಂಗಿ  ಗಂಟಲಿನಲ್ಲಿ ಸಿಕ್ಕಿ ಹಾಕಿಕೊಂಡು ಸಾವು ಬದುಕಿನೊಂದಿಗೆ ನರಳಾಟ ಅನುಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್‌ ಸಮೀಪದ ಚೇಗು  ಗ್ರಾಮದಲ್ಲಿ ನಡೆದಿದೆ. 
ಗ್ರಾಮದ ಹರೀಶ್ ಎಂಬುವರ ಮನೆಗೆ  ಎಂಟ್ರಿ ನೀಡಿದ ನಾಗರಾಜ  ಕೋಳಿಯನ್ನು ಸಾಯಿಸಿ ನಾಲ್ಕು ಮೊಟ್ಟೆಯನ್ನ ನುಂಗಿದೆ. ತನ್ನ ಗಂಟಲಿನಲ್ಲಿ ನಾಲ್ಕು‌‌ ಮೊಟ್ಟೆಗಳು ಸಿಕ್ಕಿ‌ಹಾಕಿಕೊಂಡು ಅಡುಗೆ ಮನೆಯಲ್ಲಿ ಬಿದ್ದು ಹೊರಳಾಟ ನಡೆಸುತ್ತಿತ್ತು.    
 
ಹಾವಿನ ನರಳಾಟ ಕಂಡು ಹರೀಶ್ ಮನೆಯವರು  ಭಯಗೊಂಡಿದ್ರು. ಉರುಗ ತಜ್ಞ ಆರೀಫ್ ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಆರೀಫ್ ನಾಗರಹಾವನ್ನ  ಹಿಡಿದು ಚಿಕಿತ್ಸೆ ನೀಡಿದ್ದಾರೆ.
 
ನಾಗರ ಹಾವಿನ ಹೊಟ್ಟೆಯಲ್ಲಿದ್ದ  ನಾಲ್ಕು  ಮೊಟ್ಟೆಯನ್ನೂ ಹೊರಹಾಕಿದೆ. ಇದನ್ನ ಕಂಡ ಗ್ರಾಮಸ್ಥರು ಆಶ್ಚರ್ಯಚಕಿತರಾಗಿದ್ದಾರೆ. ನಾಗರ ಹಾವನ್ನ ರಕ್ಷಣೆ ಮಾಡಿ‌ದ ಆರೀಫ್, ಹಾವನ್ನು ಚಾರ್ಮಾಡಿ ಘಾಟ್‌‌ನಲ್ಲಿ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments