ಸೈಬರ್ ವಂಚನೆಗಳಿಗೆ ಪರಿಹಾರ-ಅಶ್ವತ್ಥ ನಾರಾಯಣ

Webdunia
ಗುರುವಾರ, 2 ಜೂನ್ 2022 (18:47 IST)
ಬೆಂಗಳೂರು: ಸಮಾಜದಲ್ಲಿ ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಲ್ಲರೂ ಇವುಗಳಿಗೆ ಪರಿಹಾರದ ನಿರೀಕ್ಷೆ ಯಲ್ಲಿದ್ದಾರೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ರಾಜ್ಯ ಸರಕಾರದ ಸೈಬರ್ ಸೆಕ್ಯುರಿಟಿ ಉತ್ಕೃಷ್ಟತಾ ಕೇಂದ್ರದ ಭಾಗವಾದ ಸೈಸೆಕ್ ಕೇಂದ್ರದ 'ಸೈಬರ್ ವಾರ್ತಿಕಾ' ಮಾಸಿಕದ ವಾರ್ಷಿಕ ಸಂಚಿಕೆಯನ್ನು ಅವರು ಗುರುವಾರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಟರ್ನೆಟ್ ಬಳಸುವ ಮುನ್ನ ಅದರ ಬಗ್ಗೆ ಸರಿಯಾದ ಜಾಗೃತಿ ಇರಬೇಕಾದ್ದು ಅಗತ್ಯವಾಗಿದೆ ಎಂದರು.
ಈ ಮಾಸಿಕದಲ್ಲಿ ಸೈಬರ್ ವಂಚನೆಗಳ ಮಾಹಿತಿ ಮತ್ತು ಅಂಕಿಅಂಶಗಳು, ಉಲ್ಲಂಘನೆ, ಮಾಹಿತಿಯುಕ್ತ ಪೋಸ್ಟರುಗಳು ಮತ್ತು ಸ್ಪರ್ಧೆಗಳು ಇರುತ್ತವೆ ಎಂದು ಅವರು ನುಡಿದರು.
ಕೋವಿಡ್ ನಂತರದ ಕಾಲಘಟ್ಟದಲ್ಲಿ ಸೈಬರ್ ಸುರಕ್ಷತೆಯು ಅತ್ಯಂತ ಅಗತ್ಯವಾಗಿದೆ. ಯುವಜನರು ಮತ್ತು ಹಿರಿಯರಿಬ್ಬರೂ ಈ ಬಗ್ಗೆ ಅರಿವು ಬೆಳೆಸಿ ಕೊಳ್ಳಬೇಕು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಕಿಟ್ಸ್ ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್, ಸೈಸೆಕ್ ಮುಖ್ಯಸ್ಥ ಡಾ.ಕಾರ್ತಿಕ್ ರಾವ್ ಬಪ್ಪನಾಡು, ಕೆಎಸ್ಸಿಎಸ್ಟಿ ಕಾರ್ಯದರ್ಶಿ ಪ್ರೊ.ಅಶೋಕ ರಾಯಚೂರು, ಕಾರ್ಯನಿರ್ವಾಹಕ ಕಾರ್ಯದರ್ಶಿ ಎಚ್.ಹೇಮಂತಕುಮಾರ್, ಪ್ರೊ.ನಾಗರತ್ನ ಮುಂತಾದ ವರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments