Webdunia - Bharat's app for daily news and videos

Install App

ನಿಧಿ ಇದೆ ಎಂದು ಸರ್ಕಾರವೇ ರಸ್ತೆ ಗುಂಡಿ ತೋಡಿದೆ: ಗಮನಸೆಳೆಯುತ್ತಿದೆ ವಿಶಿಷ್ಟ ಪೋಸ್ಟರ್

Krishnaveni K
ಬುಧವಾರ, 13 ನವೆಂಬರ್ 2024 (14:36 IST)
ಬೆಂಗಳೂರು: ಸಾಮಾನ್ಯವಾಗಿ ರಸ್ತೆ ಗುಂಡಿ ಬಗ್ಗೆ ಗಿಡ ನೆಟ್ಟೋ, ಪ್ರತಿಭಟನೆಗಳನ್ನು ಮಾಡಿಯೋ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಆದರೆ ಇಲ್ಲಿ ವಿಶಿಷ್ಟ ಪೋಸ್ಟರ್ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ.

ಆದರೆ ಈಗ ಸೋಷಿಯಲ್ ಮೀಡಿಯಾದಲ್ಲಿ ರಸ್ತೆ ಗುಂಡಿ ಬಗ್ಗೆ ಯಾರೋ ಹಾಕಿರುವ ಫಲಕವೊಂದು ಎಲ್ಲರ ಗಮನ ಸೆಳೆಯುವಂತಿದೆ. ರಸ್ತೆ ಗುಂಡಿ ಬಗ್ಗೆ ಸರ್ಕಾರದ ಗಮನ ಸೆಳೆದು ಬೇಸತ್ತ ಯಾರೋ ಒಬ್ಬರು ರಸ್ತೆ ಪಕ್ಕದಲ್ಲೇ ಇಲ್ಲಿ ನಿಧಿ ಇದೆ ಎಂದು ಜ್ಯೋತಿಷಿಯೊಬ್ಬರು ಹೇಳಿರುವುದರಿಂದ ಸರ್ಕಾರ ನಿಧಿ ಹುಡುಕಲು ಗುಂಡಿ ತೆಗೆದಿದೆ. ನಿಧಾನವಾಗಿ ಚಲಿಸಿ ಎಂದು ವ್ಯಂಗ್ಯವಾಗಿ ಪೋಸ್ಟರ್ ಹಾಕಿದ್ದಾರೆ.

‘ಎಚ್ಚರಿಕೆಯ ಫಲಕ. ಯಾರೋ ಮಾಂತ್ರಿಕರು ಕೈಕಂಬದಿಂದ ಕುಕ್ಕೆ ಸುಬ್ರಹ್ಮಣ್ಯವರೆಗಿನ ರಸ್ತೆಯಲ್ಲಿ ನಿಧಿ ಇದೆ ಎಂದು ಹೇಳಿದ ಕಾರಣ ಎಚ್ಚೆತ್ತ ರಾಜ್ಯ ಸರ್ಕಾರ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕಿಸುವ ಕಾರಣದಿಂದ ಅಲ್ಲಲ್ಲಿ ರಸ್ತೆ ಮಧ್ಯೆಯೇ ದೊಡ್ಡ ಹೊಂಡಗಳನ್ನು ತೊಡಿಸಿ ಹಾಗೆಯೇ ಬಿಟ್ಟಿದ್ದಾರೆ. ನಿಧಾನವಾಗಿ ಚಲಿಸಿ’ ಎಂದು ಬೋರ್ಡ್ ಹಾಕಲಾಗಿದೆ.

ಈ ಬೋರ್ಡ್ ನೋಡಿ ನಗಬೇಕೋ ಅಲ್ಲಾ ಇಷ್ಟು ರಸ್ತೆ ಗುಂಡಿಗಳಿದ್ದರೂ ಸ್ಪಂದಿಸದ ಸರ್ಕಾರದ ಬಗ್ಗೆ ದುಃಖ ಪಡಬೇಕೋ ಗೊತ್ತಿಲ್ಲ. ಆದರೆ ಎಷ್ಟು ಹೇಳಿದರೂ ಕಿವಿಯೇ ಕೊಡದ ಸರ್ಕಾರಕ್ಕೆ ಯಾರೋ ಈ ರೀತಿ ಸರಿಯಾಗಿಯೇ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments