Publish Date: Mon, 20 May 2019 (14:51 IST)
Updated Date: Mon, 20 May 2019 (14:52 IST)
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ ನಮೋ ಭಕ್ತರು ವಿಶೇಷ ಪೂಜೆ ನಡೆಸಿದ್ದಾರೆ.
ಮೈಸೂರಿನಲ್ಲಿ ವಿಶೇಷ ಪೂಜೆ, ಹೋಮ ನೆರವೇರಿದೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ವಿಜಯದುರ್ಗಾ ಹೋಮ ನೆರವೇರಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳಿಂದ ನಡೆದ ವಿಜಯದುರ್ಗಾ ಹೋಮ ಹಾಗೂ ವಿಶೇಷ ಪೂಜೆಯಲ್ಲಿ ನರೇಂದ್ರ ಮೋದಿ ಭಾವಚಿತ್ರ ಹಿಡಿದು ಅಭಿಮಾನಿಗಳು ಕುಳಿತಿದ್ರು. ವಿಜಯದುರ್ಗಾ ಹೋಮದಲ್ಲಿ ಕುಳಿತು ಪ್ರಾರ್ಥನೆ ಮಾಡಿದ್ದಾರೆ ಮೋದಿ ಅಭಿಮಾನಿಗಳು.
ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಘೋಷಣೆ ಕೂಗಿದ್ದಾರೆ ಅಭಿಮಾನಿಗಳು.