Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯಾದ್ಯಂತ ನಾಳೆಯಿಂದ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳು ಆರಂಭಭವಾಗಲಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಾಲೆಯ ಮೊದಲ ದಿನದಂದು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಒಂದು ಸಿಹಿ ಖಾದ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ.
ಹೌದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಶಾಲೆಯ ಮೊದಲ ದಿನದಂದು ನೀಡಲಾಗುವ ಮಧ್ಯಾಹ್ನದ ಊಟದ ಜೊತೆಗೆ ಕನಿಷ್ಠ ಒಂದು ಸಿಹಿ ಖಾದ್ಯವನ್ನು ತಯಾರಿಸುವಂತೆ ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಸುತ್ತೋಲೆಯ ಪ್ರಕಾರ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗಳು ಪುನರಾರಂಭದ ಮೊದಲ ದಿನದಿಂದಲೇ ಕಾರ್ಯನಿರ್ವಹಿಸಲಿವೆ. ಸಿಹಿ ಖಾದ್ಯದ ಜೊತೆಗೆ, ಶಾಲೆಗಳನ್ನು ಅಲಂಕರಿಸಲು ಮತ್ತು ಹಬ್ಬದ ಮನಸ್ಥಿತಿಯನ್ನು ರಚಿಸಲು ಶಾಲೆಗಳಿಗೆ ಸೂಚಿಸಲಾಗಿದೆ.
ಹೆಚ್ಚಿನ ಶಾಲೆಗಳು ಈಗಾಗಲೇ ಸ್ವಚ್ಛತೆ ಮತ್ತು ಸ್ಯಾನಿಟೈಸೇಶನ್ ಅನ್ನು ಪೂರ್ಣಗೊಳಿಸಿವೆ. ಕಳೆದ ಎರಡು ವರ್ಷಗಳಿಂದ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಕಲಿಕೆಯ ಅಂತರವನ್ನು ಪರಿಗಣಿಸಿ ಸರ್ಕಾರವು ಬೇಸಿಗೆ ರಜಾದಿನಗಳನ್ನು 15 ದಿನಗಳವರೆಗೆ ಕಡಿತಗೊಳಿಸಲು ನಿರ್ಧರಿಸಿದೆ. ಮೊದಲ ಒಂದು ತಿಂಗಳು ಕಲಿಕಾ ಚೇತರಿಕೆ ಕಾರ್ಯಕ್ರಮ ಇರುತ್ತದೆ ಮತ್ತು ಜೂನ್ 15 ರ ನಂತರ, ಪ್ರಸ್ತುತ ಪಠ್ಯಕ್ರಮಕ್ಕಾಗಿ ನಿಯಮಿತ ತರಗತಿಗಳನ್ನು ನಡೆಸಲಾಗುವುದು.