Webdunia - Bharat's app for daily news and videos

Install App

ಪ್ರದೀಪ್ ಈಶ್ವರ್ ಮೇಲೆ ಕಲ್ಲು ತೂರಾಟ: ಸಿಸಿಟಿವಿ ಸೆನ್ಸಾರ್ ಆನ್ ಆಗ್ತಿದ್ದರೆ ಪರಾರಿ

Krishnaveni K
ಬುಧವಾರ, 5 ಜೂನ್ 2024 (10:09 IST)
Photo Credit: Facebook
ಚಿಕ್ಕಬಳ್ಳಾಪುರ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಪ್ರದೀಪ್ ಈಶ್ವರ್ ಗೆ ಈಗ ತಮ್ಮ ಹೇಳಿಕೆಯೇ ಸಂಕಷ್ಟ ತಂದೊಡ್ಡಿದೆ.

ಪ್ರದೀಪ್ ಈಶ್ವರ್ ಈ ಹಿಂದೆ  ವಿಧಾನಸಭೆ ಚುನಾವಣೆಯಲ್ಲಿ ಸುಧಾಕರ್ ರನ್ನು ಸೋಲಿಸಿದ್ದರು. ಇಬ್ಬರ ನಡುವೆ ರಾಜಕೀಯ ವೈರುಧ್ಯಗಳಿದ್ದೇ ಇದೆ. ಇದೇ ಕಾರಣಕ್ಕೆ ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಸುಧಾಕರ್ ಒಂದೇ ಒಂದು ವೋಟ್ ನಿಂದ ಗೆದ್ದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ, ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಪ್ರದೀಪ್ ಶಪಥ ಮಾಡಿದ್ದರು.

ನಿನ್ನೆ ಸುಧಾಕರ್ ಗೆಲ್ಲುತ್ತಿದ್ದಂತೇ ಪ್ರದೀಪ್ ಹಳೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಟ್ರೋಲ್ ಆಗಿದ್ದವು. ಇದೆಲ್ಲಾ ಬೆಳವಣಿಗೆ ನಡುವೆ ನಿನ್ನೆ ರಾತ್ರಿ ಪ್ರದೀಪ್ ನಿವಾಸಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ರಾತ್ರಿ ಸುಮಾರು 10.15 ರ ಹೊತ್ತಿಗೆ ಈ ಘಟನೆ ನಡೆದಿದೆ. ನಾಲ್ಕೈದು ಹುಡುಗರ ತಂಡ ಪ್ರದೀಪ್ ಮನೆಗೆ ಕಲ್ಲೆಸೆದಿದ್ದಾರೆ. ಇದರಿಂದ ಕಿಟಿಕಿ ಗಾಜುಗಳಿಗೆ ಹಾನಿಯಾಗಿದೆ. ಕಲ್ಲು ಎಸೆಯುತ್ತಿದ್ದಾಗ ಸಿಸಿಟಿವಿ ಸೆನ್ಸರ್ ಆನ್ ಆಗಿದ್ದು ಕಿಡಿಗೇಡಿಗಳು ಓಡಿ ಹೋಗಿದ್ದಾರೆ ಎಂದು ಪ್ರದೀಪ್ ಮನೆಯ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಪೊಲೀಸರು ಈಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments