Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಟಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ.
ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ ಸಿಬ್ಬಂದಿ ಉಪನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆಯ ಪೊಲೀಸರು ಆರೋಪಿ ಗಣೇಶ ಪೇಟ್ ನಿವಾಸಿ ಮೊಹ್ಮದ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.