Webdunia - Bharat's app for daily news and videos

Install App

ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ : ಮುತಾಲಿಕ್

Webdunia
ಸೋಮವಾರ, 29 ಆಗಸ್ಟ್ 2022 (08:23 IST)
ಧಾರವಾಡ : ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮನವಿ ಮಾಡಿದರು.

ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ ಎಂದು ಹೇಳುತ್ತಿದ್ದರು. ಅದಕ್ಕಾಗಿ ಗೋ ಹತ್ಯೆ ಕಾನೂನು ತಂದಿದ್ದಾರೆ. ಆದರೂ ಗೋಹತ್ಯೆ ನಡೆಯುತ್ತಿದೆ. ಆದರೆ ಒಂದೂ ಗೋಹತ್ಯೆ ಆಗದಂತೆ ಮಾಡುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದ್ದರಿಂದ ಹಿಂದೂ ಸಂಘಟನೆಗಳಿಗೆ ಸಮಾಜ ಬಲ ಕೊಡಬೇಕು ಎಂದು ತಿಳಿಸಿದರು.

ಅಂದು ಹಿಂದುತ್ವದ ಹೋರಾಟಗಳು ಯಶಸ್ವಿಯಾಗಿದ್ದವು. ಇಂದು ಅದು ಆಗುತ್ತಿಲ್ಲ. ಅವತ್ತು ಶುದ್ಧ, ಚಾರಿತ್ರ್ಯ, ತ್ಯಾಗ, ಬಲಿದಾನದ ನಾಯಕರಿದ್ದರು. ಅದರ ಪರಿಣಾಮದಿಂದ ದುಷ್ಟ ಶಕ್ತಿಗಳ ನಾಶವಾಯಿತು. ಹಿಂದವೀ ಸಮಾಜ ನಿರ್ಮಾಣ ಆಗಿತ್ತು. ಅದಕ್ಕೆ ಛತ್ರಪತಿ ಶಿವಾಜಿ ಮಹಾರಾಜರೇ ಉದಾಹರಣೆಯಾಗಿದ್ದಾರೆ. ಆದರೆ ಇವತ್ತಿನ ನಾಯಕರು ಯಾರು ಎಂದು ಪ್ರಶ್ನಿಸಿದ ಅವರು, ನೀಚ, ನಿರ್ಲಜ್ಜ, ಲೂಟಿಕೋರರಿದ್ದಾರೆ ಎಂದು ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments