Webdunia - Bharat's app for daily news and videos

Install App

ಸಬ್ ರಿಜಿಸ್ಟ್ರಾರ್ ಕಚೇರಿ ದುರಾಡಳಿತ ವರದಿ ನೀಡುವಂತೆ ಸೂಚನೆ

Webdunia
ಮಂಗಳವಾರ, 19 ಜುಲೈ 2022 (17:30 IST)
ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ.
ಎಸ್. ಪಾಟೀಲ್ ಆದೇಶಿಸಿದ್ದಾರೆ.
 
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಪ್ರತಿ ಉಪ ನೋಂದಣಾಧಿಕಾರಿ ಕಚೇರಿವಾರಿ ಅಲ್ಲಿನ ಅವ್ಯವಸ್ಥೆಗಳ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್, ಈ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಸೆ. 6 ರೊಳಗೆ ಉಪ ನೊಂದಣಾಧಿಕಾರಿ ಕಚೇರಿಯ ಅಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿದ್ದಾರೆ.
 
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ನ್ಯಾ. ಬಿ.ಎಸ್. ಪಾಟೀಲ್, ಉಪ ನೊಂದಣಾಧಿಕಾರಿಗಳ ಕಚೇರಿಗಳಲ್ಲಿನ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತ ನ್ಯಾಯಮೂರ್ತಿಗಳು ಬೆಂಗಳೂರಿನ ವಿವಿಧ ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಉಪ ನೋಂದಣಾಧಿಕಾರಿಗಳ ಕಚೇರಿಯಗಳಲ್ಲಿನ ದುರಾಡಳಿತ ಬಯಲಿಗೆ ಬಂದಿತ್ತು. ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿನ ದುರಾಡಳಿತ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರು, ಉಪ ಲೋಕಾಯುಕ್ತ ನ್ಯಾ. ಕೆ.ಎನ್ ಫಣೀಂದ್ರ , ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿ ಅದರಂತೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆಗೆ ಸೂಚಿಸಿದ್ದಾರೆ. ಲೋಕಾಯುಕ್ತರ ಆದೇಶದ ಮೇರೆಗೆ ಸ್ವಯಂ ಪ್ರೇರಿತ ಕೇಸಿನ ತನಿಖೆಯೂ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments