Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಈಗ ತಮ್ಮ ಹೋರಾಟ ಮುಂದುವರಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಈಗಾಗಲೇ ಸುಮಲತಾ ಗಣಿ ಸಚಿವ ಮುರುಗೇಶ್ ನಿರಾಣಿಯವರನ್ನು ಭೇಟಿ ಮಾಡಿ ಲಿಖಿತ ಮನವಿ ಮಾಡಿದ್ದರು. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ನಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿದ್ದರು.
ಇದೀಗ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿರುವ ಸುಮಲತಾ ಅಕ್ರಮ ಗಣಿಗಾರಿಕೆ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಇದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ