Webdunia - Bharat's app for daily news and videos

Install App

ಗಂಡ ಸತ್ತು ತಿಂಗಳಾಗಿಲ್ಲ ಎಂದ ರೇವಣ್ಣಗೆ ಟಾಂಗ್ ನೀಡಿದ ಸುಮಲತಾ

Webdunia
ಶುಕ್ರವಾರ, 8 ಮಾರ್ಚ್ 2019 (18:45 IST)
ಗಂಡ ಸತ್ತು ಆರು ತಿಂಗಳಾಗಿಲ್ಲ ಎಂಬ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆಗೆ  ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಯಾವ ದಿನವೂ ಈ ರೀತಿ ಮಾತುಗಳು ಮಹಿಳೆಯರ ಬಗ್ಗೆ ಬರಬಾರದು. ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರನ್ನ ಪೂಜಿಸ್ತಾರೆ. ಮಹಿಳೆಯರನ್ನ ಪೂಜಿಸಿದರೆ ಒಳ್ಳೆಯದಾಗುತ್ತೆ ಅನ್ನೋ ದೇಶ ನಮ್ಮದು. ದೇವೆಗೌಡರಿಗೆ ಅಂಬರೀಶ್ ತಂದೆ ಸ್ಥಾನ ನೀಡಿದ್ದರು. ನಾನು ಕೂಡ ಅದೇ ಮರ್ಯಾದೆ ಕೊಡುತ್ತಿದ್ದೇನೆ ಎಂದರು. ಹೀಗಾಗಿ ನಾನು ರೇವಣ್ಣ ಹಳೀಕೆಗೆ ಪ್ರತಿಕ್ರಿಯೆ ನೀಡಲ್ಲ ಅಂತ ಸುಮಲತಾ ಹೇಳಿದ್ದಾರೆ.

ನಾವು ಏನೇ ಮಾತಾಡಿದರೂ ಜನಕ್ಕೆ ಬೇರೆ ಸಂದೇಶ ಹೋಗುತ್ತದೆ. ನಾವೆಲ್ಲಾ ಸಾಮಾಜಿಕ ಕ್ಷೇತ್ರದಲ್ಲಿರುವಂತವರು. ಮಾತನಾಡುವಾಗ ಎಚ್ಚರಿಕೆಯಿಂದ ಮಾತಾಡಬೇಕು. ಏನ್ಮಾತಾಡಿದ್ರೆ ಸರಿ, ತಪ್ಪು ಅನ್ನೋದನ್ನ ನೋಡಬೇಕು. ಯಾವುದು ಸರಿ ತಪ್ಪು ಅನ್ನೋದನ್ನ ಅವರು ತಿಳಿದುಕೊಳ್ಳಬೇಕು. ಈ ಬಗ್ಗೆ ಜನ ತೀರ್ಮಾನ ಮಾಡ್ಬೇಕು ಎಂದರು.

ನನ್ನಲ್ಲಿ ತಪ್ಪಿದ್ದರೆ ನಾನು ಬೇಜಾರ್ ಮಾಡ್ಕೋಬೇಕು. ನನ್ನಲ್ಲಿ ಯಾವುದೇ ತಪ್ಪಿಲ್ಲ, ನಾನು ಯಾವತ್ತೂ ಯಾರಿಗೂ ಸವಾಲಾಕಿಲ್ಲ. ಯಾರನ್ನೂ ವಿರೋಧ ಮಾಡಲ್ಲ, ವಿವಾದ ಕೂಡ ಮಾಡಲ್ಲ. ಯಾರು ಏನೇ ಮಾತಾಡಿಕೊಳ್ಳಲಿ, ನಾನಂತೂ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ ಎಂದರು.

ಆ ಪ್ರಚೋದನಾಕಾರಿ ಹೇಳಿಕೆ ನೀಡಿ, ನನ್ನಿಂದ ಬೇರೆಯದೆ ಮಾತುಗಳನ್ನಾಡಿಸುವ ಯತ್ನ ಸಫಲವಾಗಲ್ಲ. ನನ್ನ ಆತ್ಮಸ್ಥೈರ್ಯ ಕುಗ್ಗಿಸಲೂ ಆಗಲ್ಲ.

ಅಂಬರೀಶ್ ಅವರ ಮನಸ್ಥಿತಿ ಕೂಡ ಕೆಟ್ಟದ್ದಾಗಿ ಇರಲಿಲ್ಲ. ಯಾರು ಏನೇ ಮಾತಾಡಿದ್ರು ಡೋಂಟ್ ಕೇರ್ ಅನ್ನೋರು. ನಾನು ಕೂಡ ಅಂಬರೀಶ್ ಮಾರ್ಗದರ್ಶನದಲ್ಲೇ ಹೋಗ್ತೀನಿ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments