ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ಪಾಠ - ಸುನೀಲ್ ಕುಮಾರ್ ಲೇವಡಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (18:16 IST)
ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಹಾಸ್ಟೆಲ್‍ಗಳಲ್ಲಿ ದಿಂಬು, ಚಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರವನ್ನು ಸ್ವಲ್ಪ ನೆನಪಿಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಸುನೀಲ್‍ಕುಮಾರ್ ತಿರುಗೇಟು ನೀಡಿದ್ದಾರೆ.
ಇಲಾಖೆ ಯೋಜನೆಗಳ ಕುರಿತು ಸಿದ್ದರಾಮಯ್ಯ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ಸಿದ್ದರಾಮಯ್ಯ ಅವರೇ, ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ನೀವು ಸಮಾಜವನ್ನು ಕೊಂಡೊಯ್ಯುವುದು ಯಾವಾಗ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡುವ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಸುಳ್ಳು ಪ್ರಚಾರ ಮಾಡಿ ನೀವು ಸಾಧಿಸುವ ಸಾಮಾಜಿಕ ನ್ಯಾಯವಾದರೂ ಏನು ಎಂದು ಪ್ರಶ್ನಿಸಿದ್ದಾರೆ.
 
ಹಿಂದಿನ ಆದೇಶ ವಾಪಸ್ ಪಡೆಯುವುದಕ್ಕೂ, ಘೋಷಿತ ಯೋಜನೆ ಸ್ಥಗಿತಗೊಳಿಸುವುದಕ್ಕೂ ಇರುವ ಆಡಳಿತಾತ್ಮಕ ವ್ಯತ್ಯಾಸವೂ ಗೊತ್ತಿಲ್ಲದಷ್ಟು ಅಜ್ಞಾನ ನಿಮ್ಮನ್ನು ಕಾಡುತ್ತಿದೆಯೇ, ನಿಮ್ಮ ಪಕ್ಷದ ಸಾಮಾಜಿಕ ಜಾಲತಾಣದ ಕೆಲ ಪೆದ್ದರು ಕೊಟ್ಟ ದಾಖಲೆಯನ್ನೇ ಆಧಾರವಾಗಿಟ್ಟುಕೊಂಡು ಜನರನ್ನು ಹಾದಿ ತಪ್ಪಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಮುಂದಿನ ಸುದ್ದಿ
Show comments