Publish Date: Thu, 11 Jun 2020 (09:44 IST)
Updated Date: Thu, 11 Jun 2020 (09:45 IST)
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದ ಮೂಲಕ ತಮಗೆ ವಿರುದ್ಧ ಮತ್ತು ಪರ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಒಬ್ಬರಂತೂ ನಿಮಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಿಯೇ ತೀರಬೇಕೆಂಬ ಹಠವೇಕೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಸಚಿವರು ದೇವರಾಣೆ ನನಗೆ ಆ ಇಂಗಿತವಿಲ್ಲ ಎಂದಿದ್ದಾರೆ.
ಇನ್ನು ಹಲವು ಪೋಷಕರು ಪರೀಕ್ಷೆ ನಡೆಸುವುದಾದರೆ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಪರೀಕ್ಷೆ ನಡೆಸಿ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎಂದು ಸಚಿವರಿಗೆ ಬೆಂಬಲ ಸೂಚಿಸಿದ್ದಾರೆ.