Publish Date: Sun, 23 Apr 2023 (20:15 IST)
Updated Date: Sun, 23 Apr 2023 (20:08 IST)
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದು ಹೇಳಿಕೆ ನೀಡಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.ಈ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಪ್ರತಿಕ್ರಿಯಿಸಿ ಲಕ್ಷ್ಮಣ ಸವದಿ ಡಿಸಿಎಂ ಆಗಿದ್ದವರು, ಲಿಂಗಾಯತ ಸಮುದಾಯದವರನ್ನು ನಾವಲ್ಲ ಹೊರಹಾಕಿದ್ದು. ಲಿಂಗಾಯತ ಸಿಎಂ ಆಗಿದ್ದ ಶೆಟ್ಟರ್ ರನ್ನು ಹೊರಹಾಕಿದ್ದು ನಾವಲ್ಲ. ಲಿಂಗಾಯತ ಮಾಜಿ ಸಿಎಂ, ಡಿಸಿಎಂ ಗೆ ಅವಮಾನ ಮಾಡಿದ್ದು ನಾವಲ್ಲ. ಲಿಂಗಾಯತ ಸಿಎಂ ರಾಜ್ಯ ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ರಾಜ್ಯ ಕೈ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಿದ್ದರಾಮಯ್ಯ ಪರ ಮಾತನಡಿದರು.