Webdunia - Bharat's app for daily news and videos

Install App

ಮನೆ ಸುತ್ತಾ ಅನುಮಾನಸ್ಪದ ವ್ಯಕ್ತಿಗಳ ಓಡಾಟ: ಭದ್ರತೆ ಬೇಕೆಂದ ನೇಹಾ ತಂದೆ ನಿರಂಜನಯ್ಯ

Sampriya
ಗುರುವಾರ, 25 ಏಪ್ರಿಲ್ 2024 (14:17 IST)
Photo Courtesy X
ಹುಬ್ಬಳ್ಳಿ: ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರು  ತಮ್ಮ ಜೀವಕ್ಕೂ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಬಿಡನಾಳದಲ್ಲಿರುವ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ನಡೆದು ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗಿದೆ. ಈ ಹಿನ್ನೆಲೆ ನಮ್ಮ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಭೇಟಿ ನೀಡಿ ಸಾಂತ್ವನ ನೀಡುತ್ತಿದ್ದಾರೆ. ಈ ವೇಳೆ ಸಂಶಯಾಸ್ಪದ ವ್ಯಕ್ತಿಗಳೂ ಕಂಡು ಬರುತ್ತಿದೆ. ಇದರಿಂದ ನನ್ನ ಜೀವಕ್ಕೂ ಅಪಾಯವಿರುವ ಮುನ್ಸೂಚನೆ ಸಿಗುತ್ತಿದ್ದು, ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು' ಎಂದು ನಿರಂಜನಯ್ಯ ಹಿರೇಮಠ ಹೇಳಿದರು.

ನಮಗೆ ಸಾಂತ್ವನ ಹೇಳುವ ನೆಪದಲ್ಲಿ ಮನೆಯ ಸುತ್ತಾ ಮುತ್ತಾ ಅನುಮನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಸೂಕ್ತ ಭದ್ರತೆ ಒದಗಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ನೇಹಾ ಹತ್ಯೆಗೂ ಮುನ್ನಾ ಫಯಾಜ್ ತನ್ನ ಸ್ನೇಹಿತರೊಂದಿಗೆ ನಮ್ಮ ಮನೆ ಸುತ್ತಾ ಸುತ್ತಾಡಿದ್ದ. ಅದಲ್ಲದೆ ಮಗಳಿಗೆ ಕರೆ ಮಾಡಿ ಜೀವ ಬೆದರಿಕೆಯನ್ನು ಹಾಕಿದ್ದ. ಅಪಹರಿಸಲು ಯತ್ನಿಸಿದ್ದು, ಇದೊಂದು ವ್ಯವಸ್ಥಿತ ಕೃತ್ಯವಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments