Webdunia - Bharat's app for daily news and videos

Install App

ಬೂಸ್ಟರ್ ಬಗ್ಗೆ ಕೇಂದ್ರ ಮಟ್ಟದಲ್ಲಿ ಚರ್ಚೆ

Webdunia
ಬುಧವಾರ, 1 ಡಿಸೆಂಬರ್ 2021 (20:06 IST)
ಹೊರ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಇಂದಿನಿಂದ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
 
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ವಿದೇಶದಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ  ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಡುವ ಆರ್ ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ ಅಲ್ಲಿ ಅವರನ್ನು 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ಕ್ವಾರಂಟೈನ್ ನಲ್ಲೇ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ರೋಗ ಲಕ್ಷಣ ಇರುವವರಿಗೆ, ಆರ್ ಟಿಪಿಸಿಆರ್ ವರದಿ  ನೆಗೆಟಿವ್ ಬಂದರೆ, 5ನೇ ದಿನ ಅವರನ್ನು ಮತ್ತೆ  ಪರೀಕ್ಷೆ ಮಾಡಲಾಗುವುದು. ಅದರಲ್ಲೂ ನೆಗೆಟಿವ್ ವರದಿ ಬಂದರೆ 7 ದಿನಗಳ ಬಳಿಕ ಅವರು ಕ್ವಾರಂಟೈನ್ ನಿಂದ ಹೊರಬರಬಹುದು. ಒಂದು ವೇಳೆ ಆರ್ ಟಿಪಿಸಿಆರ್ ವರದಿಯಲ್ಲಿ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ಕೊಡಲಾಗುತ್ತದೆ. ಪರೀಕ್ಷೆ ಕಡ್ಡಾಯವಾಗಿರುವುದರಿಂದ ಪ್ರಯಾಣಿಕರಿಗೆ ಸ್ವಲ್ಪ ತಡವಾಗಬಹುದು. ಆದರೆ ಇದು ಅನಿವಾರ್ಯ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments