Webdunia - Bharat's app for daily news and videos

Install App

ಟೀಚೆರ್ ಆಫ್ ದಿ ಇಯರ್‌ - ವಿಜೇತೆ ಟೀಚೆರ್ ಅರೆಸ್ಟ್

Webdunia
ಬುಧವಾರ, 21 ಸೆಪ್ಟಂಬರ್ 2022 (15:44 IST)
ಮಹಿಳಾ ಶಿಕ್ಷಕಿ ಸುಮಾರು 20 ವರ್ಷಗಳಿಂದ ಇದೇ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಟೀಚರ್‌ ಆಫ್‌ ದ ಇಯರ್‌ ಪ್ರಶಸ್ತಿಯನ್ನೂ ಪಡೆದಿದ್ದರು. ಇದು ಅಮೆರಿಕದಲ್ಲಿ ನಡೆದಿರುವ ಪ್ರಕರಣವಾಗಿದೆ. ಆರೋಪಿ ಮಹಿಳಾ ಶಿಕ್ಷಕಿಯ ಹೆಸರು ಲಿಯಾ ಕ್ವೀನ್. ಆಕೆಗೆ ಈಗ 43 ವರ್ಷ. ಜೆಂಟ್ರಿ ಇಂಟರ್ ಮೀಡಿಯೇಟ್ ಶಾಲೆಯ ಶಿಕ್ಷಕಿಯಾಗಿರುವ ಲಿಯಾ ಅವರನ್ನು ಸೆಪ್ಟೆಂಬರ್ 15 ರಂದು ಬಂಧಿಸಲಾಯಿತು. ಅಕ್ರಮ ಪದಾರ್ಥಗಳನ್ನು ಸೇವಿಸಿದ ಆರೋಪವೂ ಅವರ ಮೇಲಿದೆ. ಅಚ್ಚರಿಯ ವಿಚಾರವೆಂದರೆ, ಈ ಪ್ರಕರಣ ನಡೆದು 12 ವರ್ಷಗಳಾಗಿವೆ. ಸುಮಾರು 40 ಲಕ್ಷ ರೂಪಾಯಿಗಳನ್ನು ಪಾವತಿಸಿದ ನಂತರ, ಲಿಯಾ ಕೂಡ ಸೆಪ್ಟೆಂಬರ್ 17 ರಂದು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರು. ಜೆಂಟ್ರಿ ಪೊಲೀಸ್ ಇಲಾಖೆಯ ಪ್ರಕಾರ, 2010 ರ ಘಟನೆಯ ಮೇಲೆ ಲೇಹ್ ಅವರನ್ನು ಬಂಧಿಸಲಾಯಿತು. ಆಗ ಈಕೆ 17 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದರು ಎನ್ನಲಾಗಿದ್ದು, ಇದೀಗ ಈ ವಿಷಯ ಬಹಿರಂಗವಾಗಿದೆ.
 
ಸಂತ್ರಸ್ತ ವಿದ್ಯಾರ್ಥಿಯ ಆರೋಪಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರು, ಮಾಜಿ ಶಿಕ್ಷಕನೂ ಆಗಿರುವ ಲಿಯಾಳ ಮಾಜಿ ಪತಿಯಿಂದ ಪೊಲೀಸರು ಈ ಸಾಕ್ಷ್ಯವನ್ನು ಸಂಗ್ರಹಿಸಿದ್ದಾರೆ. ವಿದ್ಯಾರ್ಥಿಯನ್ನು ತನ್ನ ಮನೆಗೆ ಆಹ್ವಾನಿಸಿದ ಆರೋಪವೂ ಲಿಯಾಳ ಮೇಲಿದೆ. ಲಿಯಾ (Leah Queen) ಇತರ ಹಲವಾರು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಪೊಲೀಸರು ಈ ವಿಷಯದ ಬಗ್ಗೆ ಮುಂದೆ ಬರಲು ಇತರ ಸಂತ್ರಸ್ತರನ್ನು ಕೇಳಿಕೊಂಡಿದ್ದಾರೆ.
 
ಗ್ಯಾಂಟ್ರಿ ಪಬ್ಲಿಕ್ ಸ್ಕೂಲ್ಸ್ ಸೂಪರಿಂಟೆಂಡೆಂಟ್ ಟೆರ್ರಿ ಡಿಪೋಲಾ (Terry Depola) ಅವರು ಲಿಯಾ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಲಿಯಾ ಜೆಂಟ್ರಿ ಶಾಲೆಯಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲ ಬೋಧಿಸುತ್ತಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ. 2014-15ನೇ ಸಾಲಿನಲ್ಲಿ ಲಿಯಾ ಅವರಿಗೆ ವರ್ಷದ ಶಿಕ್ಷಕಿ ಪ್ರಶಸ್ತಿಯೂ ಲಭಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅವರು ಅರ್ಕಾನ್ಸಾಸ್ ಅಸೋಸಿಯೇಶನ್ ಆಫ್ ಹೆಲ್ತ್, ಫಿಸಿಕಲ್ ಎಜುಕೇಶನ್, ರಿಕ್ರಿಯೇಶನ್ ಮತ್ತು ಡ್ಯಾನ್ಸ್‌ನಿಂದ ಈ ಪ್ರಶಸ್ತಿಯನ್ನು ಪಡೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ