Webdunia - Bharat's app for daily news and videos

Install App

ಮೈಸೂರು ರಾಜಮನೆತನಕ್ಕೆ ಹೊಸ ಕಂದಮ್ಮನ ಆಗಮನ

Webdunia
ಗುರುವಾರ, 7 ಡಿಸೆಂಬರ್ 2017 (05:55 IST)
ಮೈಸೂರು: ಐವತ್ತೈದು ವರ್ಷಗಳ ನಂತರ ಮೈಸೂರು ಯದುವಂಶಕ್ಕೆ ಹೊಸ ಅತಿಥಿಯ ಆಗಮನವಾಗಿದೆ.ಯದುವೀರ ಕೃಷ್ಣದತ್ತಚಾಮರಾಜ ಒಡೆಯರ್ aವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ನಿನ್ನೇ ರಾತ್ರಿ 9.50 ಕ್ಕೆ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.


ನಿನ್ನೆ ಬೆಳಿಗ್ಗೆ ತ್ರಿಷಿಕಾ ಕುಮಾರಿ ಒಡೆಯರ್ ಆಸ್ಪತ್ರೆಗೆ ದಾಖಲಾಗಿದ್ದು, ರಾತ್ರಿ ಸರಿಸುಮಾರು 9.50 ಕ್ಕೆ ಹೆರಿಗೆಯಾಗಿದೆ.  ಪುತ್ರನ ಆಗಮನದಿಂದ ಮೈಸೂರು ರಾಜಮನೆತನದಲ್ಲಿ ಸಂತಸ ಮನೆ ಮಾಡಿದೆ. ರಾಜಮಾತೆ ಪ್ರಮೋದದೇವಿಯವರು ಹೆರಿಗೆಯ ಸಮಯದಲ್ಲಿ ಸೊಸೆಯ ಜೊತೆಗಿದ್ದರು. ಪುತ್ರನನ್ನು ಮುದ್ದಿಸಿ ಯದುವೀರ ಕೃಷ್ಣದತ್ತಚಾಮರಾಜ ಒಡೆಯರ್ ಖುಷಿಪಟ್ಟರು.


ಐವತ್ತೈದು ವರ್ಷಗಳ ನಂತರ ಮೈಸೂರು ಯದುವಂಶದ ಅರಮನೆಗೆ ಕಂದಮ್ಮನ ಆಗಮನವಾಗಿದೆ. 1962ರಲ್ಲಿ ರಾಣಿ ವಿಶಾಲಾಕ್ಷೀದೇವಿಯವರ ಜನನವಾಗಿತ್ತು. ಇವರು ಜಯಚಾಮರಾಜ ಒಡೆಯರ್ ಹಾಗು ಅಮ್ಮಣ್ಣಿಗೆ ಜನಿಸಿದ ಕೊನೆಯ ಮಗುವಾಗಿದ್ದರು. ಆ ನಂತರ ಯದುವಂಶದಲ್ಲಿ ಯಾವುದೆ ಮಗು ಜನಿಸಿರಲಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ