Publish Date: Sun, 02 Aug 2020 (16:55 IST)
Updated Date: Sun, 02 Aug 2020 (16:58 IST)
ಕರ್ನಾಟಕದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಾಗಿನಿಂದ ಕಂಪ್ಲಿ ಕ್ಷೇತ್ರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ದೂರಿದ್ದಾರೆ.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಈ ಆರೋಪ ಮಾಡಿದ್ದು, ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಕಂಪ್ಲಿ ಕ್ಷೇತ್ರದಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಕ್ಷೇತ್ರಕ್ಕೆ ಮಾಜಿ ಶಾಸಕ ಬಂದರೆ ಅಧಿಕಾರಿಗಳ ವರ್ಗವೇ ಅವರ ಹಿಂದೆ ಇರುತ್ತದೆ.
ಯಾವ ಪುರುಷಾರ್ಥಕ್ಕೆ ಮಾಜಿ ಶಾಸಕರಿಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ ಪಿ ಹೇಳಬೇಕೆಂದು ಶಾಸಕ ಗಣೇಶ್ ಒತ್ತಾಯ ಮಾಡಿದ್ದಾರೆ