Publish Date: Sat, 24 Aug 2019 (11:59 IST)
Updated Date: Sat, 24 Aug 2019 (12:01 IST)
ಬೆಂಗಳೂರು : ರಾಜ್ಯದಲ್ಲಿ ಉಂಟಾದ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ.
ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ ಪರಿಹಾರ ಘೋಷಿಸಿಲ್ಲ. ಈ ಬಗ್ಗೆ ರಾಜ್ಯದೆಲ್ಲೆಡೆ ಕೇಂದ್ರ ಸರ್ಕಾರದ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು.
ಇದೀಗ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಇಂದು ಸಂಜೆ 5.45ಕ್ಕೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
pavithra
Publish Date: Sat, 24 Aug 2019 (11:59 IST)
Updated Date: Sat, 24 Aug 2019 (12:01 IST)