Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎಂದು ಕಾಂತಾರ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ತುಳುನಾಡಿನ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಈ ಸಿನಿಮಾದ ಸಂದೇಶ. ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ ದೈವಗಳು ಯಾವುದಕ್ಕೂ ಬೆಂಬಲ ಕೊಡೋದಿಲ್ಲ ಎನ್ನುವುದನ್ನು ಈ ಸಿನಿಮಾ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನ್ನಿಸಿದೆ. ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು, ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ನಡೆಯಲಿದೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ. ಇದನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡಲು ಅಗತ್ಯ ಇಲ್ಲ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.