Webdunia - Bharat's app for daily news and videos

Install App

ಕಾಮಗಾರಿ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಜಿಲ್ಲಾಧಿಕಾರಿಗೆ ಆದೇಶ

Webdunia
ಶನಿವಾರ, 27 ನವೆಂಬರ್ 2021 (20:41 IST)
ಬೆಂಗಳೂರು: ಶಿವಮೊಗ್ಗದ ಸೊರಬ ತಾಲೂಕಿನ ಕುಬತೂರು ಗ್ರಾಮದ ದೇವಸ್ಥಾನದ ಕಟ್ಟಡದ ಮೇಲೆ ಕಾಮಗಾರಿ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಯಾವುದೇ ಆದೇಶವನ್ನು ಹೊರಡಿಸಿದೆ.
ದ್ವಾಮವ್ವ ದೇವಸ್ಥಾನದ ಹಾಲಿ ಕಟ್ಟಡದ ಮೇಲೆ ಮಹಡಿ ನಿರ್ಮಾಣ ಮಾಡುವುದಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮುಜರಾಯಿ ಅಧಿಕಾರಿಯನ್ನು ನಿರ್ಬಂಧಿಸುವಂತೆ ಕೋರಿ ವಕೀಲ ಕೆ. ಶ್ರೀಧರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ರಿತುತಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ತೀರ್ಪಿನಲ್ಲಿ, ದೇವಸ್ಥಾನದ ಛಾವಣಿಯಲ್ಲಿ ನೀರು ಸೋರುತ್ತಿರುವುದರಿಂದ ಮೊದಲನೇ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾಧಿಕಾರಿ ಮತ್ತು ಮುಜರಾಯಿ ಅಧಿಕಾರಿ ತೀರ್ಮಾನಿಸಿದ್ದಾರೆ. ಆದರೆ, ಮೊದಲನೆ ಮಹಡಿ ನಿರ್ಮಿಸಿದರೆ ದೇವಸ್ಥಾನದ ಸ್ವರೂಪವೇ ಹಾಳಾಗಲಿದೆ. ದೇವಸ್ಥಾನದ ಧ್ವಜಸ್ತಂಭದ ಮೇಲೆ ಯಾವುದೇ ನಿರ್ಮಾಣ ಕಾಮಗಾರಿ ನಡೆಸಲು ಅನುಮತಿಗೆ ಅವಕಾಶವಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಜೊತೆಗೆ, ಅನೇಕ ದೇವಸ್ಥಾನಗಳಿಗೆ ಯಾವುದೇ ಹಾನಿಯಾಗದಂತೆ ನೀರು ಸೋರುವುದನ್ನು ನಿಲ್ಲಿಸಲು ಅತ್ಯುತ್ತಮ ವಿಧಾನಗಳಿವೆ. ಅದೇ ಗ್ರಾಮದ ವಾಗೀಶ್ ಪಾಟೀಲ್ ಎಂಬವರು ಈ ಹಿಂದೆ ಸುಮಾರು 15 ಲಕ್ಷ ರೂ. ಖರ್ಚಿನಲ್ಲಿ ದೇವಸ್ಥಾನದ ರಿಪೇರಿ ಕೆಲಸ ಮಾಡಿದೆ. ಸೋರಿಕೆ ದುರಸ್ಥಿ ಕೆಲಸವನ್ನೂ ನೀಡುವ ಭರವಸೆ ನೀಡುವುದಾಗಿ ಅರ್ಜಿದಾರರೇ ಹೇಳಿದ್ದಾರೆ. ಆದ್ದರಿಂದ, ದೇವಸ್ಥಾನದ ಮೇಲೆ ಯಾವುದೇ ನಿರ್ಮಾಣ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿಗಳು ಅನುಮತಿಸಬಾರದು. ಸಂಗ್ರಹಿಸಿದ ಖರ್ಚಿನಲ್ಲಿ ನೀರು ಸೋರದಂತೆ ಉತ್ಪನ್ನ ದುರಸ್ಥಿ ಮಾಡಿಕೊಡಲು ವಾಗೀಶ್ ಪಾಟೀಲ್ ಅವರ ಕೋರಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ ಪೀಠ ಅರ್ಜಿ ಇತ್ಯರ್ಥಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments