Select Your Language

Notifications

webdunia
webdunia
webdunia
webdunia

ಪತ್ನಿಗೆ ಚಾಕುವಿನಿಂದ ಇರಿದ ಪತಿ

ಪತ್ನಿಗೆ ಚಾಕುವಿನಿಂದ ಇರಿದ ಪತಿ
bangalore , ಮಂಗಳವಾರ, 27 ಜೂನ್ 2023 (16:59 IST)
ಪತ್ನಿಯ ಮೇಲೆ ಅನುಮಾನ ಪಟ್ಟು ಪತಿ ಚಾಕು ಇರಿದಿರುವ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾರ್ ಸ್ಟ್ರೀಟ್​ನಲ್ಲಿ ನಡೆದಿದೆ. ಪತ್ನಿ ಹೊಟ್ಟೆಗೆ ಚಾಕುವಿನಿಂದ ಇರಿದು ಪತಿ ದಯಾನಂದ ಅಲಿಯಾಸ್ ನಂದ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ 9.45 ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳು ಪತ್ನಿ ಪ್ರಿಯಾಂಕಳನ್ನ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ನೀಲಸಂದ್ರದ ದಯಾನಂದ ಎಂಬಾತ ಪ್ರಿಯಾಂಕಾಳನ್ನ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರು. ಪತಿ ದಯಾನಂದ ಸದಾ ಕುಡಿದು ಪತ್ನಿ ಮೇಲೆ ಅನುಮಾನ ಪಟ್ಟು ಗಲಾಟೆ ಮಾಡ್ತಿದ್ದ. ನಿನ್ನೆ ಕೂಡಾ ದಯಾನಂದ ಕಂಠ ಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಏಕಾಏಕಿ ಮಲಗಿದ್ದ ಪತ್ನಿಯ ಜೊತೆ ಜಗಳ ತೆಗೆದು ಮಕ್ಕಳ ಮುಂದೆಯೇ ಚಾಕು ತೆಗೆದುಕೊಂಡು ಪತ್ನಿಗೆ ಇರಿದಿದ್ದಾನೆ. ರಕ್ತಸ್ರಾವವಾಗಿ ಪತ್ನಿ ಕಿರುಚಾಡ್ತಿದ್ದಂತೆ ಗಂಡ ಪರಾರಿಯಾಗಿದ್ದಾನೆ. ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಹವಾಲು ಸ್ವೀಕರಿಸಿದ H.K.ಪಾಟೀಲ್