Webdunia - Bharat's app for daily news and videos

Install App

ಪತ್ನಿ ಸುಂದರವಾಗಿಲ್ಲ ಅಂತ ಹತ್ಯೆಗೈದ ಪತಿ!

Webdunia
ಸೋಮವಾರ, 4 ಜುಲೈ 2022 (10:43 IST)
ಹುಬ್ಬಳ್ಳಿ :  ಪತ್ನಿ ಸುಂದರವಾಗಿಲ್ಲ, ದಪ್ಪವಾಗಿದ್ದಾಳೆ ಎಂಬ ಕಾರಣಕ್ಕೆ 9 ವರ್ಷದ ಹಿಂದೆ ಚೂರಿ ಇರಿದು ಕೊಲೆ ಮಾಡಿದ್ದ ಪ್ರಾಧ್ಯಾಪಕನಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ . 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
 
ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿ ಉದಯಕುಮಾರ ಕಾಂಬಳೆ ಶಿಕ್ಷೆಗೆ ಒಳಗಾದವರು. ಪತ್ನಿ ಶ್ರೀಸಿಮಾ ಬಾವಿತಾಳ ಎಂಬುವವರನ್ನು ಈತ ಚೂರಿ ಇರಿದು ಹತ್ಯೆ ಮಾಡಿದ್ದ. ಶನಿವಾರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ತೀರ್ಪು ಪ್ರಕಟಿಸಿದ್ದಾರೆ.

ಉದಯಕುಮಾರ ರಸಾಯನ ಶಾಸ್ತ್ರದಲ್ಲಿ ಪಿಎಚ್.ಡಿ ಮಾಡುವ ವೇಳೆ ಶ್ರೀಸಿಮಾ ಎಂಬುವರನ್ನು ಪ್ರೀತಿಸಿದ್ದ. ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದ. ಬಳಿಕ ಹುಬ್ಬಳ್ಳಿಯ ಶಿವಗಿರಿಯಲ್ಲಿ ವಕೀಲ ಅನಿಲಕುಮಾರ ಯಾವಗಲ್ ಅವರ ಮನೆ ಬಾಡಿಗೆ ಪಡೆದು ವಾಸವಾಗಿದ್ದರು.

ಉದಯಕುಮಾರ ನಗರದ ಪಿ.ಸಿ. ಜಾಬಿನ್ ಕಾಲೇಜಿನಲ್ಲಿ ಮತ್ತು ಶ್ರೀಸಿಮಾ ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.

ಮದುವೆಯಾಗಿ ಮೂರು ತಿಂಗಳ ಬಳಿಕ ಪತ್ನಿ ತನಗೆ ಹೊಂದಾಣಿಕೆ ಆಗುತ್ತಿಲ್ಲ. ಸುಂದರವಾಗಿಲ್ಲ, ದಪ್ಪವಾಗಿದ್ದಾಳೆ ಎಂಬ ಕಾರಣ ಹೇಳಿ ವಿಚ್ಛೇದನಕ್ಕಾಗಿ ಬಲವಂತ ಮಾಡುತ್ತಿದ್ದ. ಹೀಗಾಗಿ ಇಬ್ಬರ ನಡುವೆ ವಾಗ್ವಾದ ನಡೆಯುತ್ತಿತ್ತು. ಇದೇ ವಿಚಾರಕ್ಕೆ 2013 ಏ. 18ರಂದು ಬೆಳಿಗ್ಗೆ ಇಬ್ಬರ ನಡುವೆ ಹೆಚ್ಚಿನ ಗಲಾಟೆಯಾಗಿದೆ.

ಆರೋಪಿ ಉದಯಕುಮಾರ ಪತ್ನಿಯನ್ನು ಚಾಕುವಿನಿಂದ ಇರಿದು ಬಳಿಕ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದ. ಸಂಶಯಗೊಂಡ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡುವಷ್ಟರಲ್ಲಿ ಶ್ರೀಸಿಮಾ ಮೃತಪಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments