Webdunia - Bharat's app for daily news and videos

Install App

ಸದನದಲ್ಲಿ ಸದ್ದು ಮಾಡಿದ ಜೈನ ಮುನಿಗಳ ಹತ್ಯೆ..!

Webdunia
ಮಂಗಳವಾರ, 11 ಜುಲೈ 2023 (18:15 IST)
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಂದು ವಿಧಾನಸಭೆ ಕಲಾಪದಲ್ಲಿ ಚರ್ಚೆ ಆಯಿತು.ಈ ಪ್ರಕರಣ ಅತ್ಯಂತ ಹೀನಾಯವಾಗಿದ್ದು.ಇದನ್ನ ಯಾರು ಕೂಡ ಸಮರ್ಥ ನೆ ಮಾಡಿಕೊಳ್ಳಲಾಗದು ಈ ಹತ್ಯೆಯನ್ನ ತೀವ್ರವಾಗಿ ಖಂಡಿಸಬೇಕು ಇದರ ಸತ್ಯಾತ್ಯತೆ ಬಗ್ಗೆ ಚರ್ಚೆ ಆಗಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.ಜೈನ ಮುನಿಗಳ ಹತ್ಯೆವಿಚಾರವಾಗಿ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಅಭಯ್ ಪಾಟೀಲ್ ಜೈನ ಮುನಿ ನಾಪತ್ತೆಯಾದ ವಿಚಾರವಾಗಿ ದೂರು ನೀಡಿದ್ದರು. ಆದರೆ ಪೊಲೀಸ್ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ ಎಂದು ಟ್ರಸ್ಟ್ ಸದಸ್ಯರು ಆರೋಪ ಮಾಡಿದ್ದರು. ಹತ್ಯೆ ಆರೋಪಿ ಒರ್ವನ ಹೆಸರು ಮಾತ್ರ ಬಹಿರಂಗವಾಗಿ ಹೇಳಿದ್ದಾರೆ ಪೊಲೀಸರು.ಆದರೆ ಮತ್ತೋರ್ವನ ಹೆಸರನ್ನು ಬಹಿರಂಗವಾಗಿ ಹೇಳಿಲ್ಲ. ಇದು ಸಂಶಯಕ್ಕೆ ಕಾರಣವಾಗಿದೆ.ಎರಡನೇ ಆರೋಪಿ ಹಸನ್ ಹೆಸರು ಏಕೆ ಹೇಳುತ್ತಿಲ್ಲ.ಪೊಲೀಸರು ಟ್ರಸ್ಟೀಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಇದೆ.ದಿಗಂಬರ ಸಮಾಜದ ಮುನಿಗಳು ಆರ್ಥಿಕ ವ್ಯವಹಾರ ಮಾಡಲು ಸಾಧ್ಯವಿಲ್ಲ.ಆದರೆ ಸ್ವಾಮೀಜಿಗಳು ಎಲ್ಲಾ ತ್ಯಾಗ ಮಾಡಿ ಸನ್ಯಾಸಿ ಆಗಿದ್ದಾರೆ.ಯಾರ ಒತ್ತಡದಿಂದ ಪೊಲೀಸರು ಮುನಿಗಳು ಆರ್ಥಿಕ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಬೇಕು.ಇದನ್ನು ಸಿಬಿಐಗೆ ನೀಡಬೇಕು ಎಂದು ಅಭಯ ಪಾಟೀಲ್ ಆಗ್ರಹಿಸಿದರು.ಈ ವೇಳೆ ಶಾಸಕ ಲಕ್ಷ್ಮಣ ಸೌವದಿ ಮಾತನಾಡಿ ಈ ಕೃತ್ಯ ಎಸಗಿದವರನ್ನ ಕಠಿಣ ಕ್ರಮ ಕೈಗೊಳ್ಳಬೇಕು.ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು - ಮರಣದಂಡನೆ ವಿಧಿಸುವ ರೀತಿ ಕ್ರಮ ಆಗಬೇಕು ಎಂದು ಸಿಎಂ ಬಳಿ ಮನವಿ ಮಾಡ್ತೀನಿ ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments