Webdunia - Bharat's app for daily news and videos

Install App

ಮತದಾರರ ಹೆಸರನ್ನು ಡಿಲೀಟ್​​ ಮಾಡಿಲ್ಲ-ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ

Webdunia
ಮಂಗಳವಾರ, 22 ನವೆಂಬರ್ 2022 (19:15 IST)
ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ ಸ್ಪಷ್ಟನೆ ನೀಡಿದ್ದಾರೆ. ನಿರ್ದಿಷ್ಟ ಸಮುದಾಯಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ವರದಿ ಸುಳ್ಳು. ಮತದಾರರ ಪಟ್ಟಿ ಯಾರೊಬ್ಬರ ಜಾತಿ, ಧರ್ಮದ ಮಾಹಿತಿಯನ್ನು ಹೊಂದಿಲ್ಲ. ನಿಧನರಾದ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮದಂತೆ ಡಿಲೀಟ್​ ಮಾಡಲಾಗಿದೆ. ಒಂದೇ ವ್ಯಕ್ತಿಗೆ ಅನೇಕ ಹೆಸರಿರುವ ಸಾಧ್ಯತೆಯ ಬಗ್ಗೆ ಸಾಫ್ಟ್​​​ವೇರ್​ ಬಳಸಿ ಪತ್ತೆ ಮಾಡಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಹೆಸರನ್ನು ಡಿಲೀಟ್​ ಮಾಡಲಾಗಿದೆ ಎಂದು ತಿಳಿಸಿದರು. ಈಗಾಗಲೇ 2023 ಮತದಾರರ ಪಟ್ಟಿಯ ಕರುಡನ್ನು ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು ಪ್ರಕಟಿಸಲಾಗಿದೆ. ಡಿಸೆಂಬರ್​​ 12ರ ವರೆಗೆ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಹೆಸರು ಬಿಟ್ಟು ಹೋದವರು ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರಿಸುವುದು, ಸರಿಪಡಿಸುವುದು, ಹೊಸ ವಿಳಾಸಕ್ಕೆ ಹೆಸರು ಸ್ಥಳಾಂತರಿಸಬಹುದು ಎಂದು ಸೂಚಿಸಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷ, ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗಂಭೀರ ಆರೋಪ ಮಾಡಿದೆ.  KPCC ಈ ಬಗ್ಗೆ ಚುಣಾವಣಾ ಆಯೋಗಕ್ಕೆ ದೂರು ನೀಡಿದ್ದು, FIR ಕೂಡ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments