Webdunia - Bharat's app for daily news and videos

Install App

ನರಸತ್ತ ಕಾಂಗ್ರೆಸ್ ಆಡಳಿತದಲ್ಲಿ ರೌಡಿಗಳಿಗೆ ಲಗಾಮು ಹಾಕುವ ಶಕ್ತಿಯಿಲ್ಲ

Sampriya
ಗುರುವಾರ, 6 ಫೆಬ್ರವರಿ 2025 (16:07 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಂಗ್ ತೋರಿಸಿ ಬೆದರಿಕೆ ಹಾಕುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಈಚೆಗೆ ಕೋರಮಂಗಲ 80 ಫೀಟ್ ರೋಡ್ ಸೆಕೆಂಡ್ ಸ್ಟೇಜ್ ಅಂಗಡಿಯಲ್ಲಿ  ಲಾಂಗ್ ತೋರಿಸಿ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು ದರೋಡೆ ಅತ್ಯಾಚಾರ  ರೌಡಿ  ಹಾವಳಿ ಮಿತಿಮೀರಿದೆ.

ಅದಕ್ಷ ಆಡಳಿತ ನಡೆಸುತ್ತಿರುವ  ಸಿದ್ದರಾಮಯ್ಯ ಮತ್ತು   ಅಸಮರ್ಥ ಗೃಹ ಸಚಿವ ಡಾ.ಪರಮೇಶ್ವರ್‌  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ.  

ಕಾನೂನು ಸುವ್ಯವಸ್ಥೆಯನ್ನು ಹತೋಟಿ ಮಾಡಲಾಗದ  ನೀವು ಆಸ್ಥಾನದಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.


====

ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಅಂಗಡಿಯವರಿಗೆ ಲಾಂಗ್ ತೋರಿಸಿ ಬೆದರಿಕೆ ಕೇಸ್ ಗಳು ಹೆಚ್ಚಾಗಿದೆ.

ಏನಾಗ್ತಿದೆ ಬೆಂಗಳೂರಲ್ಲಿ ಅಂಗಡಿ ಬರ್ತಾರೆ ಲಾಂಗ್ ತೋರಿಸ್ತಾರೆ ಅನ್ನೋ ಹಾಗೆ ಆಗಿದೆ. ಅಂಗಡಿ ಬೇಕರಿಗೆ ನುಗ್ಗಿ ದಾಂಧಲೆ ಮಾಡಿ ಬೆದರಿಸುವ ಪ್ರಕರಣಗಳು ಇತ್ತೀಚೆಗೆ ವರದಿಗಳು ಹೆಚ್ಚಾಗಿ ಬರುತ್ತಿದೆ.

ಬೆಂಗಳೂರಲ್ಲಿ ಪುಂಡ ಪೋಕರಿಗಳಿಗೆ ಸ್ವಲ್ಪವೂ ಭಯ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅಂಗಡಿಗೆ ಬಂದು ಲಾಂಗ್ ತೋರಿಸಿ ಫ್ರೀಯಾಗಿ ತೆಗೆದುಕೊಂಡು ಹೋಗ್ತಾನೆ . ಫ್ರೀಯಾಗಿ ಕೊಡದೆ ಇದ್ರೆ ಲಾಂಗ್ ತೋರಿಸಿ ಅವಾಜ್ ಹಾಕಿ ವಸೂಲಿ ಮಾಡುತ್ತಿದ್ದಾರೆ.

ಇಲ್ಲೋರ್ವ ಭೂಪ, ಅಂಗಡಿ ಮಾಲೀಕನಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದಾನೆ.

ನಿನ್ನೆ ಅಂಗಡಿಗೆ ಬಂದು ಆಸಾಮಿ ಲಾಂಗ್ ತೋರಿಸಿ ಬೆದರಿಸಿದ್ದಾನೆ.

ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಜರುಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments