Webdunia - Bharat's app for daily news and videos

Install App

ಬಿಜೆಪಿಗೆ ಬೆಂ.ದಕ್ಷಿಣದಲ್ಲಿ ಹಣ ನೀಡಿ ಮತ ಪಡೆಯಬೇಕಾದ ದುಃಸ್ಥಿತಿ ಎದುರಾಗಿದೆ: ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ

Sampriya
ಭಾನುವಾರ, 14 ಏಪ್ರಿಲ್ 2024 (15:23 IST)
Photo Courtesy X
ಬೆಂಗಳೂರು: ಕಳೆದ ಚುನಾವಣೆಯಲ್ಲಿ ಅಪಾರ ಹಣವನ್ನು ಹಂಚಿ ಗೆದ್ದ ಬೆಂಗಳೂರು ದಕ್ಷಿಣದಲ್ಲಿ ಕ್ಷೇತ್ರದಲ್ಲಿ ಜನಪರವಾದ ಅಭಿವೃದ್ಧಿ ಮಾಡದೇ ಇಂದು ಮತ್ತೆ ಹಣ ಹಂಚಿ ಮತ ಪಡೆಯಬೇಕಾದ ದುಸ್ಥಿತಿ ಬಿಜೆಪಿಗೆ ಬಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಲೂಟಿ ಮಾಡಿರುವ ಕಪ್ಪು ಹಣದ ಹೊಳೆಯೇ ಬೆಂಗಳೂರು ದಕ್ಷಿಣದಲ್ಲಿ ಹರಿಯಲಾರಂಭಿಸಿದೆ.

ಇದಕ್ಕೆ ಜಯನಗರದಲ್ಲಿ ಪತ್ತೆಯಾದ ಬಿಜೆಪಿಯ ಕೋಟ್ಯಂತರ ರೂಪಾಯಿ ದಾಖಲೆರಹಿತ ನಗದು ಸಾಕ್ಷಿ.

ಈ ಹಣವನ್ನು ಪ್ರಧಾನಿಯವರ ಬೆಂಗಳೂರು ಚುನಾವಣೆ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಕೊಂಡೊಯ್ಯಲಾಗುತ್ತಿತ್ತೇ?

ಹಣ ಕಳೆದುಕೊಂಡ ಹತಾಶೆಯಲ್ಲಿ @BJP4Karnataka
 ದವರು @INCKarnataka
 ಬಗ್ಗೆ ಮಾಡುತ್ತಿರುವ ಆಧಾರ ರಹಿತ ಆರೋಪ ಮಾನ ಉಳಿಸಿಕೊಳ್ಳುವ ಕೊನೆ ಪ್ರಯತ್ನದಂತೆ ಕಾಣುತ್ತಿದೆ.

ಕಳೆದ ಚುನಾವಣೆಯಲ್ಲಿ ಅಪಾರ ಹಣವನ್ನು ಹಂಚಿ ಗೆದ್ದು, ಕ್ಷೇತ್ರದಲ್ಲಿ ಜನಪರವಾದ ಅಭಿವೃದ್ಧಿ ಮಾಡದೇ ಇಂದು ಮತ್ತೆ ಹಣ ಹಂಚಿ ಮತ ಪಡೆಯಬೇಕಾದ ದುಸ್ಥಿತಿ ಬಿಜೆಪಿಗೆ ಬಂದಿದೆ.

ನಮ್ಮ ಗ್ಯಾರಂಟಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ರಾಜ್ಯದ ಮನೆ ಮನೆಗೆ ತಲುಪಿದೆ. ಇದರಿಂದ ಇಡೀ ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ.

ಸೋಲಿನ ಭಯದಿಂದ ಕಂಗೆಟ್ಟಿರುವ ಬಿಜೆಪಿ ಹಣದ ಮೂಲಕ ಬೆಂಗಳೂರು ದಕ್ಷಿಣದಲ್ಲಿ ಚುನಾವಣೆ ಗೆಲ್ಲಬೇಕು ಎಂದು ನಿರ್ಧರಿಸಿದ್ದರೂ ಮತದಾರರು ಭ್ರಷ್ಟ ಹಣಕ್ಕೆ ಮರುಳಾಗುವುದಿಲ್ಲ ಎನ್ನುವ ನಂಬಿಕೆ ನನಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments