Webdunia - Bharat's app for daily news and videos

Install App

ಪೊಲೀಸ್‍ರು ಸಂವಿಧಾನದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕೆಂದ ಎಸ್ಪಿ

Webdunia
ಗುರುವಾರ, 9 ಆಗಸ್ಟ್ 2018 (18:34 IST)
ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ಧೈರ್ಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಪೊಲೀಸ್ ಅಧಿಕಾರಿ ಸಲಹೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದರು.

ಪೊಲೀಸ್ ಇಲಾಖೆಯು ಶಿಸ್ತಿಗೆ ಹೆಸರಾದ ಇಲಾಖೆಯಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತುಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೇಮಿಸುವ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್ ಇಲಾಖೆಯ ಒಬ್ಬ ಸಿಬ್ಬಂದಿ ತನ್ನ ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಸ್.ಪಿ., ಎನ್.ಶಶಿಕುಮಾರ ಹೇಳಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments