Webdunia - Bharat's app for daily news and videos

Install App

ಬೆಂಗಳೂರು-ಮಂಗಳೂರು ಸಂಚಾರ ಸಂಕಟಕ್ಕೆ ಒಂದೇ ಗಂಟೆಯಲ್ಲಿ ಪರಿಹಾರ ನೀಡಿದ ರೈಲ್ವೇ ಇಲಾಖೆ

Sampriya
ಶುಕ್ರವಾರ, 19 ಜುಲೈ 2024 (16:31 IST)
Photo Courtesy X
ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ಕರಾವಳಿಯನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿದ್ದರಿಂದ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಕ್ರಮ ಕೈಗೊಂಡಿದೆ.

ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು 06547 ಸಂಖ್ಯೆಯ ರೈಲು ಯಶವಂತಪುರದಿಂದ ಇಂದು (ಶುಕ್ರವಾರ) ಹೊರಡಲಿದ್ದು, 06548 ಸಂಖ್ಯೆಯ ರೈಲು ಮಂಗಳೂರು ಜಂಕ್ಷನ್‌ನಿಂದ ಶನಿವಾರ ಹೊರಡಲಿದೆ.

06549 ಸಂಖ್ಯೆಯ ರೈಲು ಇದೇ 21 ಮತ್ತು 22ರಂದು ಯಶವಂತಪುರರಿಂದ ಮಂಗಳೂರು ಜಂಕ್ಷನ್‌ಗೆ ಹೊರಡಲಿದ್ದು, 06550 ಸಂಖ್ಯೆಯ ರೈಲು 21 ಮತ್ತು 22ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಹೊರಡಲಿದೆ.

ನೈರುತ್ಯ ರೈಲ್ವೆ ಮಾಹಿತಿ ಪ್ರಕಾರ, ಈ ಎಲ್ಲ ರೈಲುಗಳಲ್ಳಿ ತಲಾ ಎರಡು ಸ್ಲೀಪರ್ ಕೋಚ್‌ಗಳು ಸೇರಿದಂತೆ ಒಟ್ಟು 18 ಕೋಚ್‌ಗಳು ಇರಲಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೆಚ್ಚುವರಿ  ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ವಿನಂತಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments