Webdunia - Bharat's app for daily news and videos

Install App

ಸಿಎಂ ಹುಬ್ಬಳ್ಳಿ ಘಟನೆಯ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದೇ ಇದಕ್ಕೆ ಕಾರಣ: ಉದಯಗಿರಿ ಠಾಣೆಗೆ ಅಶೋಕ್ ಭೇಟಿ

Sampriya
ಮಂಗಳವಾರ, 11 ಫೆಬ್ರವರಿ 2025 (16:26 IST)
ಮೈಸೂರು: ಉದಯಗಿರಿಯಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆದ ಘಟನೆ ಸಂಬಂಧ ಮಾಹಿತಿ ಪಡೆಯಲು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು  ಉದಯಗಿರಿ ಠಾಣೆಗೆ ಮಧ್ಯಾಹ್ನ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಘಟನೆಯ ಮಾಹಿತಿ ಪಡೆದರು. 'ಕಲ್ಲು ತೂರಾಟ ನಡೆಸಿದವರನ್ನೂ ಬಂಧಿಸಿ' ಎಂದು ಆಗ್ರಹಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ನಡೆಯಲು ಈ ಹಿಂದೆ ಹುಬ್ಬಳ್ಳಿ ಘಟನೆಯ ಆರೋಪಿಗಳಿಗೆ ಸಿದ್ದರಾಮಯ್ಯ ಕ್ಲೀನ್ ಚಿಟ್ ನೀಡಿದ್ದು ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರ ಮೇಲೆ ಏನೇ ಮಾಡಿದರು ನಡೆಯುತ್ತದೆ ಎಂಬಂತಾಗಿದೆ. ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ಮಾತುಗಳನ್ನಾಡಿದ್ದಾರೆ ಎಂದು ಆರೋಪ ಮಾಡಿದರು.

ಗೃಹಸಚಿವ ಪರಮೇಶ್ವರ ಅವರಿಗೆ ಒತ್ತಾಯಪೂರ್ವಕವಾಗಿ ಈ ಇಲಾಖೆ ನೀಡಲಾಗಿದೆ. ಹೀಗಾಗಿ ಅವರು ಇಲಾಖೆಯನ್ನು ನಿರ್ವಹಿಸುವಲ್ಲಿ ನಿರಾಸಕ್ತಿ ತೋರಿಸುತ್ತಿದ್ದಾರೆ. ಸರ್ಕಾರ ಪೊಲೀಸರಿಗೆ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಅವಕಾಶ ನೀಡಬೇಕು. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರಕರಣದಲ್ಲಿ ಸರ್ಕಾರದ ನಡೆ ಇದಕ್ಕೆ ವ್ಯತಿರಿಕ್ತವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments