Webdunia - Bharat's app for daily news and videos

Install App

ಅಂದು ಬಸವಣ್ಣ, ಇಂದು ಸಿದ್ದರಾಮಣ್ಣ: ಲಿಂಗಾಯುತ ಸಮುದಾಯ ಪರ ಐತಿಹಾಸಿಕ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ಸರ್ಕಾರ

Rajesh patil
ಸೋಮವಾರ, 19 ಮಾರ್ಚ್ 2018 (17:04 IST)
ನಿವೃತ್ತ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ನಾಗಮೋಹನ್ ದಾಸ್ ನೇತೃತ್ವದ ಏಳು ಸದಸ್ಯ ತಜ್ಞ ಸಮಿತಿಯ ಶಿಫಾರಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಸರ್ವಾನುಮತದಿಂದ ಸ್ವೀಕರಿಸಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಸುದೀರ್ಘ ಚರ್ಚೆಯ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟದ ಮೂಲಗಳು ತಿಳಿಸಿವೆ.
 
ಸಚಿವರಾದ ಎಂ.ಬಿ.ಪಾಟೀಲ್ ಮತ್ತು ವಿನಯ್ ಕುಲ್ಕರ್ಣಿಯವರೊಂದಿಗೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಕೆಲ ಕಾಲ ಪರಸ್ಪರ ವಾಗ್ದಾಳಿಯಲ್ಲಿ ತೊಡಗಿದಾಗ ಸದನದಲ್ಲಿ ಕಾವೇರಿದ ವಾತಾವರಣ ಎದುರಾಗಿತ್ತು ಎನ್ನಲಾಗಿದೆ. 
 
ಲಿಂಗಾಯತ ಸಮುದಾಯಕ್ಕೆ "ಧಾರ್ಮಿಕ ಅಲ್ಪಸಂಖ್ಯಾತ" ಸ್ಥಾನಮಾನವನ್ನು ಶಿಫಾರಸು ಮಾಡುವ ಬಗ್ಗೆ ಸಮಿತಿಯು ತನ್ನ ವರದಿಯನ್ನು ಮಾರ್ಚ್ 2, 2018 ರಂದು ಸರಕಾರಕ್ಕೆ ಸಲ್ಲಿಸಿತ್ತು. ಆದರೆ, ಕಳೆದ ಮಾರ್ಚ್ 14 ರಂದು ನಡೆದ ಸಭೆಯಲ್ಲಿ ಭಿನ್ನಾಭಿಪ್ರಾಯಗಳು ಎದುರಾಗಿದ್ದರಿಂದ ಸಭೆಯನ್ನು ಮುಂದೂಡಲಾಯಿತು. 
 
ವರದಿಯ ಪ್ರಕಾರ, ಲಿಂಗಾಯತ ಸಮುದಾಯವನ್ನು ಹಿಂದೂ ಧರ್ಮದ ಉಪ-ಪಂಗಡವೆಂದು ಪರಿಗಣಿಸಲಾಗುವುದಿಲ್ಲ. ಇದನ್ನು 12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವಣ್ಣ ಸ್ಥಾಪಿಸಿದರು. ಐತಿಹಾಸಿಕ ದಾಖಲೆಗಳ ಆಧಾರದ ಮೇಲೆ, ಲಿಂಗಾಯತ ಸಮುದಾಯಕ್ಕೆ ಬೌದ್ಧಧರ್ಮ ಮತ್ತು ಜೈನ ಧರ್ಮದಂತೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಬಹುದು ಎಂದು ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments