Webdunia - Bharat's app for daily news and videos

Install App

ಹೈಕೋರ್ಟ್ ತೀರ್ಪಿನ ಪ್ರಕಾರ ಯಥಾಸ್ಥಿತಿ ಮುಂದುವರೆಯಲಿದೆ- ಸಚಿವ ಬಿಸಿ ನಾಗೇಶ್

Webdunia
ಗುರುವಾರ, 13 ಅಕ್ಟೋಬರ್ 2022 (14:57 IST)
ಸುಪ್ರೀಂ ಕೋರ್ಟ್​​​ನಲ್ಲಿ ಹಿಜಾಬ್​​ ಪ್ರಕರಣದ​ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ B.C. ನಾಗೇಶ್ ಪ್ರತಿಕ್ರಿಯೆ ನೀಡಿದರು. ಸುಪ್ರೀಂ ಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೇ ತೀರ್ಪು ಬರುತ್ತೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇಂದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತೆ ಎಂದು ಶಿಕ್ಷಣ ಸಚಿವ B.C. ನಾಗೇಶ್​​ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲಾ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಆಚರಣೆ, ಚಿಹ್ನೆಗಳ ಪ್ರದರ್ಶನ ಸಲ್ಲದು ಎಂದು ಸರ್ಕಾರದ ನಿಲುವು ಪುನರುಚ್ಚರಿಸಿದರು. ವಿಶ್ವದಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಬೀದಿಗಿಳಿದಿದ್ದಾರೆ. ಇರಾನ್​ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್​ ತೀರ್ಪು ಸಹ ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿಯಬಹುದು ಎಂದು ನಿರೀಕ್ಷಿಸಿದ್ದೆ. ಹಾಗೆಂದು ನಾನು ಸುಪ್ರೀಂ ಕೋರ್ಟ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ