Webdunia - Bharat's app for daily news and videos

Install App

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

Sampriya
ಭಾನುವಾರ, 4 ಮೇ 2025 (16:29 IST)
ಬೆಂಗಳೂರು: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ ನಾವು ಹಾಗೂ ಭೇಟಿ ಕೊಟ್ಟಿಲ್ಲ. ಆದರೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಕೊಲೆಯಾದ ಸುಹಾಸ್ ಶೆಟ್ಟಿಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಯಾರೂ ಸಾಂತ್ವನ ಹೇಳದ ವಿಚಾರ ಬಗ್ಗೆ ಪ್ರಶ್ನೆಯೊಂದಕ್ಕೆ ಪರಮೇಶ್ವರ್ ಈ ರೀತಿ ಉತ್ತರಿಸಿದರು. ಕರ್ನಾಟಕ ಪೊಲೀಸ್‌ ಇಲಾಖೆ ಸಮರ್ಥವಾಗಿದೆ. ಹೀಗಾಗಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ನಾಯಕರು ಹೇಳುತ್ತಿರುವುದು ಅವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ ಅದರ ಅಗತ್ಯ ಇಲ್ಲ ಎಂದು ಬೆಂಗಳೂರಿನಲ್ಲಿ ಹೇಳಿದರು.

ಇದು ಪ್ರತೀಕಾರಕ್ಕೆ ನಡೆದಿದೆಯಾ ಇಲ್ವಾ ಎನ್ನುವುದು ಗೊತ್ತಿಲ್ಲ. ಏನೇ ಕಾರಣ ಇದ್ದರೂ ತನಿಖೆ ನಡೆಸಿದ ಮೇಲೆ ಗೊತ್ತಾಗುತ್ತದೆ. ನಾವು ಊಹೆ ಮಾಡಿ‌ ಇದೇ ಕಾರಣ ಅಂತ ಹೇಳಲು ಬರುವುದಿಲ್ಲ. ತನಿಖೆ ಮುಗಿಯೋವರೆಗೂ ಏನೂ ಹೇಳಲು ಸಾಧ್ಯವಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments