Select Your Language

Notifications

webdunia
webdunia
webdunia
webdunia

ಎಂದಿನಂತಿರಲ್ಲ ಈ ಬಾರಿಯ ಮೈಸೂರು ದಸರಾ: ವಿಶ್ವವಿಖ್ಯಾತ ಹಬ್ಬಕ್ಕೆ ಹೊಸ ಲುಕ್ ನೀಡಲು ಸಿಎಂ ಸೂಚನೆ

Mysore Dasara

Sampriya

ಬೆಂಗಳೂರು , ಸೋಮವಾರ, 12 ಆಗಸ್ಟ್ 2024 (19:09 IST)
Photo Courtesy X
ಬೆಂಗಳೂರು: ದಸರಾ ಮಹೋತ್ಸವ ಆಯೋಜನೆಯ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು.

ಸಭೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,  ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ - ಬರ ಇರುವ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ.

ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ.
ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ.

ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು.
ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು.

'ಕರ್ನಾಟಕ ಸಂಭ್ರಮ -50' ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು.
ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು.

ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಚನ್ನಪಟ್ಟಣದಲ್ಲಿ ಕಾವೇರುತ್ತಿದೆ ಬೈ ಎಲೆಕ್ಷನ್: ಎನ್‌ಡಿಎ ಮೈತ್ರಿಗೆ ತಲೆನೋವಾದ ಬಿಜೆಪಿಯ 'ಸೈನಿಕ'