Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಈ ಬಾರಿ ಚಾಮುಂಡೇಶ್ವರಿ, ಬಾದಾಮಿಯಲ್ಲಿ ಸ್ಪರ್ಧಿಸಿದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಐದು ದಿನಗಳ ಹಿಂದೆ ಮಾತನಾಡಿದ್ದ ಸಿದ್ದರಾಮಯ್ಯ ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಹೈಕಮಾಂಡ್ ಒಪ್ಪಿಗೆ ಕೊಟ್ಟರೇ, ಟಿಕೆಟ್ ಕೊಟ್ಟರೇ ಎಂಬ ಮಾತನ್ನು ಸಿದ್ದರಾಮಯ್ಯ ಪದೇ ಪದೇ ಒತ್ತಿ ಹೇಳಿದ್ದರು.
ಈ ವಿಚಾರ ಅದೇ ದಿನ ಚರ್ಚೆಗೆ ಗ್ರಾಸವಾಗಿತ್ತು. ಈಗ ಚಿಕ್ಕಮ್ಮದೇವಿಯ ದೈವವಾಣಿ ವೈರಲ್ ಆದ ನಂತರ ಈ ಮಾತಿಗೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದೆ.
ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಅಂತಿಮ ಅಲ್ವಾ? ಕಳೆದ ಬಾರಿಯಂತೆ ಈ ಚುನಾವಣೆಯಲ್ಲೂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದು ಎಂಬ ಊಹೆಗೆ ಪೂರಕ ಎಂಬಂತೆ ಶಾಸಕ ಯತೀಂದ್ರ ಇವತ್ತು ಮಹತ್ವದ ಹೇಳಿಕೆ ನೀಡಿದ್ದಾರೆ.