Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಈ ಆರೋಪಿಗಳಿಗೆ ಇಂದೇ ಬಿಡುಗಡೆ

Krishnaveni K
ಬುಧವಾರ, 25 ಸೆಪ್ಟಂಬರ್ 2024 (11:18 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪೈಕಿ ಮೂವರಿಗೆ ಇಂದು ಬಿಡುಗಡೆಯ ಭಾಗ್ಯ ದೊರೆಯಲಿದೆ.

ಎ15, ಎ16 ಮತ್ತು ಎ17 ಗಳಾದ ಕಾರ್ತಿಕ್, ನಿಖಿಲ್ ಮತ್ತು ಕೇಶವ ಮೂರ್ತಿ ಇಂದು ಸಂಜೆ ಜೈಲಿನಿಂದ ರಿಲೀಸ್ ಆಗುವ ಸಾಧ್ಯತೆಯಿದೆ. ಈ ಮೂವರು ಆರೋಪಿಗಳ ಮೇಲೆ ನೇರವಾಗಿ ಕೊಲೆಯಲ್ಲಿ ಭಾಗಿಯಾದ ಆರೋಪವಿರಲಿಲ್ಲ. ಬದಲಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪವಿತ್ತು.

ಈ ಮೂವರು ಆರೋಪಿಗಳಿಗೆ ಸೋಮವಾರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಅಧಿಕೃತವಾಗಿ ಜೈಲು ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ಬಾರದೇ ಬಿಡುಗಡೆ ಸಾಧ್ಯವಾಗದು. ಇದೀಗ ಜೈಲು ಅಧಿಕಾರಿಗಳು ನ್ಯಾಯಾಲಯದ ಆದೇಶ ಪಡೆದ ಬಳಿಕ ಇಂದು ಸಂಜೆ ಮೂವರನ್ನು ರಿಲೀಸ್ ಮಾಡುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಎಲ್ಲಾ ಆರೋಪಿಗಳನ್ನೂ ಒಂದೊಂದು ಜೈಲಿನಲ್ಲಿರಿಸಲಾಗಿದೆ. ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ. ಈ ಮೂವರೂ ರೇಣುಕಾಸ್ವಾಮಿಯ ಶವ ಸಾಗಿಸಲು ಮತ್ತು ಆತನ ಕೊಲೆಯನ್ನು ನಾವೇ ಮಾಡಿದ್ದಾಗಿ ಪೊಲೀಸರ ಬಳಿ ಶರಣಾಗಲು ಬಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments