Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸದಸ್ಯತ್ವ ನೊಂದಣಿಯಲ್ಲಿ ಯಶಸ್ವಿ ಆದವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಸದಸ್ಯತ್ವ ನೋಂದಣಿ ಮಾಡಿ ತೋರಿಸಿ.
ಭರವಸೆಯಂತೆ ಟಿಕೆಟ್ ನೀಡದಿದ್ದರೆ ನಿಮ್ಮ ಪರವಾಗಿ ನಾನು ಹೋರಾಟ ಮಾಡುತ್ತೇನೆ ಎಂದು ಹೇಳಿದರು. ಇನ್ನೂ ರಾಜ್ಯದಲ್ಲಿ ಆಗುವ ಒಟ್ಟು ಸದಸ್ಯತ್ವ ನೋಂದಣಿಯಲ್ಲಿ ಅರ್ಧದಷ್ಟನ್ನು ಬೆಂಗಳೂರು ನಗರ ಮತ್ತು ಬೆಂಗ ಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಮಾಡಬೇಕು. ಬಿಬಿಎಂಪಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಪ್ರತಿ ಮನೆಯನ್ನೂ ತಲುಪಬೇಕು. ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.