Publish Date: Thu, 06 Apr 2023 (16:29 IST)
Updated Date: Thu, 06 Apr 2023 (16:11 IST)
ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ವೈ.ಎಸ್.ವಿ.ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು, ಪುಲಕೇಶಿ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.