Webdunia - Bharat's app for daily news and videos

Install App

ಕಂಬಕ್ಕೆ ಕಟ್ಟಿಹಾಕಿ ಕಳ್ಳನಿಗೆ ಥಳಿತ

Webdunia
ಶನಿವಾರ, 2 ಫೆಬ್ರವರಿ 2019 (14:38 IST)
ಕತ್ತಲ ರಾತ್ರಿಯಲ್ಲಿ ಮಾಡಬಾರದ್ದನ್ನು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಭೂಪನನ್ನು ಕಂಬಕ್ಕೆ ಕಟ್ಟಿ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.  

ಅಡಿಕೆ ಕದಿಯಲು ಬಂದ ಯುವಕರನ್ನು ರೈತರು ಹಿಡಿದು ಕಂಬಕ್ಕೆ ಕಟ್ಟಿದ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಕಳೆದ ಆರು ತಿಂಗಳಿನಿಂದ ಬೂಕನಕೆರೆ ಗ್ರಾಮದ ಸುತ್ತಮುತ್ತಲಿನ ಅಡಿಕೆ ತೋಟಗಳು ಹಾಗೂ ಅಡಿಕೆ ಗೋದಾಮಿನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕರು, ಗ್ರಾಮಸ್ಥರ ನಿದ್ದೆಗೆಡಿಸಿದ್ದರು. ಹೊಸಹೊಳಲು ಗ್ರಾಮದ ಚಂದು ತನ್ನ ಸ್ನೇಹಿತರಾದ ಹೇಮಂತ, ಅಶೋಕ, ಗುಂಡ ಅವರೊಂದಿಗೆ ಎರಡು ಬೈಕುಗಳು ಹಾಗೂ ಒಂದು ಆಫೆ ಆಟೋವನ್ನು ತೆಗೆದುಕೊಂಡು ಬಂದು ಕಳ್ಳತನ ಮಾಡುತ್ತಿದ್ದ.

ಅಡಿಕೆ ಗೋದಾಮಿನಲ್ಲಿ ತಡರಾತ್ರಿ ಸದ್ದು ಕೇಳಿಸಿದ ಹಿನ್ನೆಲೆಯಲ್ಲಿ ನಿದ್ರೆಯಿಂದ ಎಚ್ಚೆತ್ತ ವೀರೇಶ್ ಮತ್ತು ಸತೀಶ್ ಕಳ್ಳತನ ಮಾಡುತ್ತಿದ್ದ ಚಂದು(25)ವನ್ನು ಹಿಡಿದರು. ಇನ್ನು ಮೂವರು ಕತ್ತಲಿನಲ್ಲಿ ಓಡಿ ನಾಪತ್ತೆಯಾದರು. ಕಳೆದ ಎರಡು ಬಾರಿ ಕಳ್ಳತನ ನಡೆಸಿ ಚಾಕಚಕ್ಯತೆ ಪ್ರದರ್ಶಿಸಿದ್ದ ಕಳ್ಳರು, ಮೂರನೇ ಬಾರಿ ಕಳ್ಳತನ ಮಾಡಲು ಬಂದಿದ್ದಾಗ ಸಿಕ್ಕಿಬಿದ್ದಿದ್ದಾರೆ. ಹೊಸಹೊಳಲು ಗ್ರಾಮದ ಯುವಕ ಚಂದುನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿದ ಬೂಕನಕೆರೆ ಗ್ರಾಮಸ್ಥರು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments