Publish Date: Wed, 05 Jul 2023 (17:04 IST)
Updated Date: Wed, 05 Jul 2023 (17:08 IST)
ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು ಅಂತಾ ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಅಂತಾ ನಾವೆಲ್ಲಾ ಭಾವಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ, ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ. ಬಹುಶಃ ಇವತ್ತು ಘೋಷಣೆ ಆಗಬಹುದು ಎಂದರು.. ಬಿಜೆಪಿಯಿಂದ ಮೊಂಡಾಟ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಅವರು ಪ್ರತಿಕ್ರಿಯಿಸಿದ್ರು, ಬೇಜವಾಬ್ದಾರಿಯಿಂದ ಮಾತಾಡುವುದನ್ನ ಸಿದ್ದರಾಮಯ್ಯ ನಿಲ್ಲಿಸಬೇಕು ಎಂದು ತಿರುಗೇಟು ನೀಡಿದ್ರು.