ಚನ್ನಪಟ್ಟಣದಲ್ಲಿ ರಂಗೇರಿದ ಪ್ರಚಾರ

Webdunia
ಸೋಮವಾರ, 30 ಏಪ್ರಿಲ್ 2018 (13:08 IST)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ರಾಜಕಾರಣ. ಅಭ್ಯರ್ಥಿಗಳ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಪೋಸ್ಟ್ಸ್ ವೈರಲ್ ಆಗಿವೆ.‌ 
ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅಫಿಡವಿಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನೆ ವಿಳಾಸದ ವಿಚಾರವಾಗಿ ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. 
 
ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಮನೆ ವಿಳಾಸದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 
 
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಎಂ.ರೇವಣ್ಣ ಬೆಂಗಳೂರಿನ ನಿವಾಸದಲ್ಲಿರುವುದಾಗಿ ಅಫಿಡವಿಟ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮದ ಮನೆಯಲ್ಲಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. 
 
ಇದೇ ವಿಚಾರವನ್ನಿಟ್ಟುಕೊಂಡು ಕಾರ್ಯಕರ್ತರ ನಡುವೆ ಭಾರಿ ಚರ್ಚೆ ನಡೆದಿದೆ. ಹೊರಗಿನವರು,  ಸ್ಥಳಿಯರು ಎಂಬ ಭಾವನೆ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರು. ಹೊರಗಿನವರನ್ನ ತಿರಸ್ಕರಿಸಿ, ಸ್ಥಳಿಯರಿಗೆ ಮನ್ನಣೆ ಕೊಡಿ ಎಂದು ಸಂದೇಶ ರವಾನಿಸುತ್ತಿರುವ ಸಿ.ಪಿ.ಯೋಗೇಶ್ವರ್ ಬೆಂಬಲಿಗರಿಂದ ಚರ್ಚೆ ಬಿಸಿಯೇರುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments