Webdunia - Bharat's app for daily news and videos

Install App

ದೇಶದಲ್ಲಿ ಓಮಿಕ್ರಾನ್ ಒಟ್ಟು ಸಂಖ್ಯೆ 422ಕ್ಕೆ ಏರಿಕೆ – ಎಚ್ಚರವಿರಲಿ ನಿರ್ಲಕ್ಷ್ಯ ಬೇಡ

Webdunia
ಸೋಮವಾರ, 27 ಡಿಸೆಂಬರ್ 2021 (21:05 IST)
ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ನಾಗಾಲೋಟ ಮುಂದುವರಿದಿದ್ದು, ಒಟ್ಟು ಕೇಸ್‍ಗಳ ಸಂಖ್ಯೆ 422ಕ್ಕೆ ಏರಿಕೆ ಕಂಡಿದೆ. ಮಧ್ಯಪ್ರದೇಶ, ಹಿಮಾಚಲಪ್ರದೇಶದಲ್ಲಿ ಒಂದೊಂದು ಕೇಸ್ ದಾಖಲಾಗುವ ಮೂಲಕ ಓಮಿಕ್ರಾನ್ ಸೋಂಕಿತ ರಾಜ್ಯಗಳ ಸಂಖ್ಯೆ 19ಕ್ಕೆ ಏರಿದೆ.
ವ್ಯಾಕ್ಸಿನ್ ಹಾಕಿಸಿಕೊಳ್ಳದವರೇ ಓಮಿಕ್ರಾನ್ ಸೂಪರ್ ಸ್ಪ್ರೆಡರ್ ಅಂತ ದಕ್ಷಿಣ ಆಫ್ರಿಕಾದ ವೈದ್ಯರು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಲಸಿಕೆ ಪಡೆದವರು ಹಾಗೂ ಕೊರೊನಾಗೆ ತುತ್ತಾಗಿದ್ದವರು ಮತ್ತೆ ಓಮಿಕ್ರಾನ್ ಪಾಸಿಟಿವ್ ಆದಾಗ ಅವರಿಂದ ಸೋಂಕು ಹರಡುವ ಪ್ರಮಾಣ ತೀರಾ ಕಡಿಮೆ. ಆದ್ರೆ, ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಂದ ಸೋಂಕು ಬೇಗ ಪಸರಿಸುತ್ತೆ. ಭಾರತದಲ್ಲೂ ಇದು ಸಾಧ್ಯತೆ ಇದೆ ಅಂತ ಎಚ್ಚರಿಕೆ ನೀಡಿದ್ದಾರೆ.
ವಿದೇಶದಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಬಂದ 8 ಮಂದಿಗೆ ಕೊರೊನಾ ದೃಢಪಟ್ಟಿದೆ. ಕತಾರ್‌ನಿಂದ ಬಂದ ಇಬ್ಬರು, ಬ್ರಿಟನ್‍ನಿಂದ ಬಂದ 6 ಮಂದಿಯಲ್ಲಿ ಸೋಂಕು ಕಂಡುಬಂದಿದೆ. ಸೋಂಕಿತರನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕೊಡಗಿನ ಪೊನ್ನಂಪೇಟೆ ಶಾಲೆಯಲ್ಲಿ ಮತ್ತೆ 6 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಈ ಮಧ್ಯೆ, ಕ್ರಿಸ್‍ಮಸ್ ರಜೆ, ವರ್ಷಾಂತ್ಯದ ರಜೆಯಿಂದಾಗಿ ರಾಜ್ಯದ ಬಹುತೇಕ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ಮೈಸೂರಿನ ಪ್ರವಾಸಿ ಕೇಂದ್ರಗಳಾದ ಚಾಮುಂಡಿಬೆಟ್ಟ, ಅರಮನೆ, ಮೃಗಾಲಯ, ಕೆಆರ್‌ಎಸ್‌ನ ಬೃಂದಾವನ ಗಾರ್ಡನ್, ಕೊಡಗಿನ ಅಬ್ಬಿ ಫಾಲ್ಸ್, ದುಬಾರೆ ಆನೆ ಶಿಬಿರ, ಕಾವೇರಿ ನಿಸರ್ಗ ಧಾಮ, ರಾಜಾಸೀಟ್‍ನಲ್ಲಿ ಸಾವಿರಾರು ಜನ ಸೇರಿದ್ದಾರೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಜನಜಾತ್ರೆ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments