Webdunia - Bharat's app for daily news and videos

Install App

ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿ ಗೌಡ ಇನ್ನಿಲ್ಲ

Sampriya
ಸೋಮವಾರ, 16 ಡಿಸೆಂಬರ್ 2024 (20:15 IST)
Photo Courtesy X
ಕಾರವಾರ: ಗಿಡಗಳ ಆರೈಕೆ ಮೂಲಕ ಪ್ರಸಿದ್ಧ ಪಡೆದು, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ವೃಕ್ಷ ಮಾತೆ ತುಳಸಿ ಗೌಡ ನಿಧನರಾಗಿದ್ದಾರೆ.  

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಾಲಕ್ಕಿ ಸಮುದಾಯದ ತುಳಸಿಗೌಡ (86) ಇಂದು (ಡಿಸೆಂಬರ್ 16) ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದರು.

ಹಾಲಕ್ಕಿ ಸಮುದಾಯದ ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ಲಕ್ಷಾಂತರ ಮರಗಳನ್ನು ಸಾಕಿ ಬೆಳೆಸಿದ್ದಾರೆ. ಪರಿಸರವಾದಿ ತುಳಸಿ ಗೌಡ ಅವರು ಈವರೆಗೂ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು, ಬೃಹತ್ ಕಾಡನ್ನೇ ಬೆಳೆಸಿದ್ದಾರೆ.‌‌‌

ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಬಳಿಕ ಕಳೆದ ವರ್ಷ ಅಂದರೆ 2023ರಲ್ಲಿ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments